ಬೆಳಗಾವಿ: ಲೋಕಸಭಾ ಚುನಾವಣೆಗೆ ನಾನೇ ವಿಜಯಪುರದ ಅಭ್ಯರ್ಥಿ. ಸಿದ್ದರಾಮಯ್ಯನವರ ಅಪ್ಪನಾಣೆ ಮೋದಿಯೇ ಮುಂದಿನ ಪ್ರಧಾನಿ ಆಗುತ್ತಾರೆ ಎಂದು ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ಅಪ್ಪನಾಣೆಗೂ ಮುಂದಿನ ಪ್ರಧಾನಿ ನರೇಂದ್ರ ಮೋದಿಯೇ. ಅದರಲ್ಲಿ ಯಾವುದೇ ಸಂಶಯವಿಲ್ಲ. ಈ ಮೂಲಕ ಹಿಂದೆ ಮೋದಿ ಅವರಪ್ಪನಾಣೆ ಮತ್ತೆ ಪ್ರಧಾನಿ ಆಗಲ್ಲ ಎಂದಿದ್ದ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಜಿಗಜಿಣಗಿ ತಿರುಗೇಟು ನೀಡಿದ್ದಾರೆ.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ನಾನು ಹಳೆಯ ದೋಸ್ತಿಗಳು. ನನ್ನ ಮತ್ತು ಅವನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. 40 ವರ್ಷದಿಂದಲೂ ಜತೆಯಲ್ಲಿಯೇ ಇದ್ದೇವೆ. ಯತ್ನಾಳ್ರನ್ನು ರಾಜಕೀಯವಾಗಿ ನಾನೇ ಬೆಳೆಸಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಪಕ್ಷದ ನಾಯಕರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅಭಿವೃದ್ಧಿ ಮಾಡಿದಕ್ಕೇ ನಿರಂತರವಾಗಿ ಆಯ್ಕೆ ಆಗುತ್ತಿದ್ದೇನೆ ಎಂದು ಹೇಳಿದರು.
ನಮ್ಮಪ್ಪನ ಆಣೆ ಅಲ್ಲ, ಸಿದ್ದರಾಮಯ್ಯ ಅವರ ಅಪ್ಪನಾಣೆಗೂ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗೇ ಆಗುತ್ತಾರೆ. ನಾನು ಅಭಿವೃದ್ಧಿ ಮಾಡಿದ್ದಕ್ಕೆ ನಿರಂತರವಾಗಿ ಗೆಲುವು ಸಾಧಿಸುತ್ತ ಬಂದಿದ್ದೇನೆ.ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಾನೇ ವಿಜಯಪುರದ ಬಿಜೆಪಿ ಅಭ್ಯರ್ಥಿ ಎಂದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…