Featured

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ – vishwanews24

ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ : ನಾರಾಯಣಸಾ ಕೆ.ಭಾಂಡಗೆ

ಬಾಗಲಕೋಟೆ: 2025ನೇ ಸಾಲಿನ ಕರ್ನಾಟಕ ಬಜೆಟ್​​ ಮಂಡನೆಯಾಗಿದ್ದು, ಸಿದ್ದರಾಮಯ್ಯ ಮಂಡಿಸಿರೋ ಬಜೆಟ್​ನ ಗಾತ್ರ ಬರೋಬ್ಬರಿ 4 ಲಕ್ಷ ಕೋಟಿ ರೂ ಆಗಿದೆ. ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ರಾಜ್ಯಸಭಾ ಸದಸ್ಯ ನಾರಾಯಣಸಾ ಕೆ.ಭಾಂಡಗೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರ ಬಜೆಟ್ ಮುಸಲ್ಮಾನರಿಗೆ ರಂಜಾನ್ ಕೊಡುಗೆ ಎಂದು ಹೇಳಿದ್ದಾರೆ.

ಸರ್ಕಾರ ರಂಜಾನ್ ಹಬ್ಬದ ಇಫ್ತಾರ್ ಕೂಟದ ಔತಣವನ್ನು ಪೂರ್ಣವಾಗಿ ಕೊಟ್ಟಂತಿದೆ. ಮುಸಲ್ಮಾನರಿಗೆ ಕೊಟ್ಟ ಅನುದಾನ ನೋಡಿದ್ರೆ, ಇದು ಮುಸಲ್ಮಾನರ ಸರ್ಕಾರ ಅನ್ನೋದನ್ನ ಸಿದ್ದರಾಮಯ್ಯ ಮತ್ತೆ ಸಾಬೀತು ಮಾಡಿದ್ದಾರೆ. ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸಲ್ಮಾನರ ಮದುವೆಗೆ ಸಹಾಯಧನ ಕೊಟ್ಟಿದ್ದಾರೆ. ಅಲ್ಪಸಂಖ್ಯಾತ 16 ಮಹಿಳಾ ಕಾಲೇಜ್, 100 ಉರ್ದು ಶಾಲೆಗೆ ಹೈಟೆಕ್ ಟಚ್, ಹಜ್ ಭವನ ನಿರ್ಮಾಣಕ್ಕೆ ದುಡ್ಡು ಕೊಡ್ತಿದ್ದಾರೆ. ಮುಸಲ್ಮಾನರು ಎಂದು ಹೇಳಬಾರದು ಎಂಬ ಕಾರಣಕ್ಕೆ ಅಲ್ಪಸಂಖ್ಯಾತರು ಎಂದು ಹೇಳಿದ್ದಾರೆ. 25 ಸಾವಿರ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣಾ ತರಬೇತಿ ವಿಚಾರವಾಗಿ ಯಾಕೆ, ಅವರಿಗೆ ಯಾಕೆ ರಕ್ಷಣಾ ತರಬೇತಿ? ಬೇರೆ ವಿದ್ಯಾರ್ಥಿಗಳಿಗೆ ಸ್ವಯಂ ರಕ್ಷಣೆ ಬೇಡವೇನು ಎಂದು ಪ್ರಶ್ನೆ ಮಾಡಿದರು.

ಈ ಬಜೆಟ್ ನಲ್ಲಿ ಮುಸಲ್ಮಾನರಿಗೆ ಎನ್ ಕೊಡಬೇಕೆಂದು ರಂಜಾನ್ ಹಬ್ಬದ ಕೊಡುಗೆಯಾಗಿ ಸಂಪೂರ್ಣ ಬಜೆಟ್‌ನ್ನು ಮುಸಲ್ಮಾನರಿಗೆ ಕೊಟ್ಟಿದ್ದಾರೆ. ಎಲ್ಲವನ್ನೂ ಮುಸಲ್ಮಾನರಿಗೆ ಕೊಟ್ಟ ಈ ಸರ್ಕಾರದ್ದು ಬೋಗಸ್ ಬಜೆಟ್ ಉರ್ದು ಉರ್ದು ಅಂತ ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸಲ್ಮಾನರಿಗೆ ಕೊಟ್ಟಿದ್ದು, ಇದು ತಾರತಮ್ಯ ಮಾಡಿದಂತಿದೆ ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

3 days ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

3 days ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

3 days ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

3 days ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

3 days ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

3 days ago