Featured

ಸಿದ್ದರಾಮಯ್ಯನವ್ರು ಹೊಸ ಜಾತಿಗಳನ್ನು ಸೃಷ್ಟಿಸಿ ಶಾಶ್ವತ ಅಪರಾಧಿ ಆಗೋದು ಬೇಡ : ಶಾಸಕ ಸುನಿಲ್ ಕುಮಾರ್ – vishwanews24

ಒಬಿಸಿ ಜಾತಿಗಳ ಮೀಸಲಾತಿ ಕ್ರಿಶ್ಚಿಯನ್ನರು ಕಸಿಯುವ ಹುನ್ನಾರ : ಶಾಸಕ ಸುನಿಲ್ ಕುಮಾರ್  ಆರೋಪ

ಬೆಂಗಳೂರು: ಕ್ರಿಸ್ಚಿಯನ್ ಜೊತೆ 42 ಹಿಂದೂ ಉಪಚಾತಿಗಳನ್ನು ಸೇರಿಸಿ ಹೊಸ ಜಾತಿಗಳನ್ನು ಈ ಸರ್ಕಾರ ಸೃಷ್ಟಿ ಮಾಡಿದೆ ಎಂದು ಶಾಸಕ ಸುನಿಲ್ ಕುಮಾರ್  ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸುನಿಲ್ ಕುಮಾರ್ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ತರಾತುರಿಯಲ್ಲಿ ಜಾತಿ ಸಮೀಕ್ಷೆ ನಡೀತಿದೆ. ಹೊಸದಾಗಿ ಜಾತಿಗಳ ಪಟ್ಟಿ ಸೃಷ್ಟಿ ಮಾಡಿದ್ದಾರೆ. ಇವಕ್ಕೆ ಸರ್ಕಾರದ ಯಾವುದೇ ದಾಖಲೆಗಳಿಲ್ಲ. ಕ್ರಿಶ್ಚಿಯನ್ ಜತೆ 47 ಹಿಂದೂ ಉಪಜಾತಿಗಳನ್ನು ಸೇರಿಸಿ ಹೊಸ ಜಾತಿಗಳ ಸೃಷ್ಟಿ ಮಾಡಿದ್ದಾರೆ. ಇದರ ಪರಿಣಾಮ ಮತಾಂತರಕ್ಕೆ ಸರ್ಕಾರ ಪರೋಕ್ಷ ಬೆಂಬಲ ಕೊಡ್ತಿದೆ. ಮುಂದೆ ಹಿಂದುಳಿದ ವರ್ಗಗಳ ಮೀಸಲಾತಿ ಕಸಿಯುವ ಹುನ್ನಾರ ನಡೀತಿದೆ. ಒಬಿಸಿ ಜಾತಿಗಳ ಮೀಸಲಾತಿ ಕ್ರಿಶ್ಚಿಯನ್ನರು ಕಸಿಯುವ ಹುನ್ನಾರ ಇದು ಎಂದು ಆರೋಪಿಸಿದ್ದಾರೆ.

ಈ ಹಂತದಲ್ಲೇ ಇದನ್ನು ಚಿವುಟಿ ಹಾಕಬೇಕು. ಈ ನಿಟ್ಟಿನಲ್ಲಿ ಇವತ್ತು ದುಂಡುಮೇಜಿನ ಸಭೆ ನಡೆಸಿ ಮುಂದಿನ ಹಂತದ ಹೋರಾಟ, ಅಭಿಯಾನ ಬಗ್ಗೆ ಚರ್ಚೆ ಮಾಡ್ತೇವೆ. ಸರ್ಕಾರದ ಉದ್ದೇಶವೇ ಇಡೀ ಸಮಾಜ ಒಡೆಯುವುದು, ಮೀಸಲಾತಿ ಕಸಿಯುವುದು ಹಾಗೂ ಮತಾಂತರಕ್ಕೆ ಪ್ರಚೋದಿಸುವುದು ಆಗಿದೆ. ಸ್ವಾಮೀಜಿಗಳು ಇವತ್ತಿನ ಸಭೆಗೆ ಬರ್ತಾರೆ. ಸಿದ್ದರಾಮಯ್ಯನವ್ರು ಹೊಸ ಜಾತಿಗಳನ್ನು ಸೃಷ್ಟಿಸಿ ಶಾಶ್ವತ ಅಪರಾಧಿ ಆಗೋದು ಬೇಡ. ಇವತ್ತು ರಾಜ್ಯಪಾಲರಿಗೂ ಈ ಸಂಬ0ಧ ದೂರು ಕೊಡ್ತೇವೆ ಎಂದು ತಿಳಿಸಿದ್ದಾರೆ.

ಒಬಿಸಿ ವರ್ಗಗಳ ಮೀಸಲಾತಿ ಕಸಿಯುವ ಕೆಲಸಕ್ಕೆ ಮುಸುಕು ಹಾಕಿಕೊಂಡು ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ನಮ್ಮ ದೂರು, ಆಕ್ಷೇಪಣೆಗಳಿಗೆ ಹಿಂದುಳಿದ ವರ್ಗಗಳ ಆಯೋಗ ಕಿವಿಗೆ ಹಾಕಿಕೊಂಡಿಲ್ಲ. ಸರ್ಕಾರ ಅರಾಜಕತೆ ಸೃಷ್ಟಿಸಲು ಹೊರಟಿದೆ, ಇದಕ್ಕೆ ನಾವು ಬಿಡಲ್ಲ. ಇವತ್ತಿನ ಸಭೆ ನೂರಕ್ಕೂ ಹೆಚ್ಚು ಗಣ್ಯರು ಬರ್ತಾರೆ. ಮುಂದಿನ ಒಂದು ವಾರದಲ್ಲಿ ಹೋರಾಟ ಮಾಡ್ತೇವೆ. ರಾಜ್ಯಪಾಲರು ಮಧ್ಯಪ್ರವೇಶಕ್ಕೆ ಕೋರುತ್ತೇವೆ. ಈ ಹೊಸ ಜಾತಿಗಳ ಪಟ್ಟಿ ತೆಗೆಯುವಂತೆ ಸರ್ಕಾರಕ್ಕೆ ನಿರ್ದೇಶನ ಕೊಡಲು ರಾಜ್ಯಪಾಲರಿಗೂ ಭೇಟಿ ಮಾಡಿ ಮನವಿ ಮಾಡ್ತೇವೆ ಎಂದಿದ್ದಾರೆ.

ಕುರುಬ ಸಮಯದಾಯ ಎಸ್‌ಟಿಗೆ ಸೇರಿಸಲು ಇಂದು ಸಭೆ ವಿಚಾರವಾಗಿ ಮಾತನಾಡಿ, ಯಾವುದೇ ಜಾತಿಗೆ ಇನ್ನೊಂದು ಜಾತಿ ಸೇರಿಸಬೇಕು ಅಂದ್ರೆ ಕುಲಶಾಸ್ತ್ರೀಯ ಅಧ್ಯಯನ ಆಗಬೇಕು. ದೊಡ್ಡಮಟ್ಟದ ಚರ್ಚೆಗಳು ಆಗಬೇಕು. ಸಿದ್ದರಾಮಯ್ಯ ಕುರುಡು ಪ್ರೇಮ ತೋರಿಸಿ ಕುರುಬ ಸಮುದಾಯ ಎಸ್‌ಟಿಗೆ ಸೇರಿಸಲು ಹೊರಟಿದ್ದಾರೆ. ಆ ಮೂಲಕ ರಾಜ್ಯದ ಹಿತ ಮರೆತು ಸ್ವಹಿತ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

6 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

6 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

7 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

7 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

9 hours ago