ಬೆಂಗಳೂರು: ಕ್ರಿಸ್ಚಿಯನ್ ಜೊತೆ 42 ಹಿಂದೂ ಉಪಚಾತಿಗಳನ್ನು ಸೇರಿಸಿ ಹೊಸ ಜಾತಿಗಳನ್ನು ಈ ಸರ್ಕಾರ ಸೃಷ್ಟಿ ಮಾಡಿದೆ ಎಂದು ಶಾಸಕ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಸುನಿಲ್ ಕುಮಾರ್ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ತರಾತುರಿಯಲ್ಲಿ ಜಾತಿ ಸಮೀಕ್ಷೆ ನಡೀತಿದೆ. ಹೊಸದಾಗಿ ಜಾತಿಗಳ ಪಟ್ಟಿ ಸೃಷ್ಟಿ ಮಾಡಿದ್ದಾರೆ. ಇವಕ್ಕೆ ಸರ್ಕಾರದ ಯಾವುದೇ ದಾಖಲೆಗಳಿಲ್ಲ. ಕ್ರಿಶ್ಚಿಯನ್ ಜತೆ 47 ಹಿಂದೂ ಉಪಜಾತಿಗಳನ್ನು ಸೇರಿಸಿ ಹೊಸ ಜಾತಿಗಳ ಸೃಷ್ಟಿ ಮಾಡಿದ್ದಾರೆ. ಇದರ ಪರಿಣಾಮ ಮತಾಂತರಕ್ಕೆ ಸರ್ಕಾರ ಪರೋಕ್ಷ ಬೆಂಬಲ ಕೊಡ್ತಿದೆ. ಮುಂದೆ ಹಿಂದುಳಿದ ವರ್ಗಗಳ ಮೀಸಲಾತಿ ಕಸಿಯುವ ಹುನ್ನಾರ ನಡೀತಿದೆ. ಒಬಿಸಿ ಜಾತಿಗಳ ಮೀಸಲಾತಿ ಕ್ರಿಶ್ಚಿಯನ್ನರು ಕಸಿಯುವ ಹುನ್ನಾರ ಇದು ಎಂದು ಆರೋಪಿಸಿದ್ದಾರೆ.
ಈ ಹಂತದಲ್ಲೇ ಇದನ್ನು ಚಿವುಟಿ ಹಾಕಬೇಕು. ಈ ನಿಟ್ಟಿನಲ್ಲಿ ಇವತ್ತು ದುಂಡುಮೇಜಿನ ಸಭೆ ನಡೆಸಿ ಮುಂದಿನ ಹಂತದ ಹೋರಾಟ, ಅಭಿಯಾನ ಬಗ್ಗೆ ಚರ್ಚೆ ಮಾಡ್ತೇವೆ. ಸರ್ಕಾರದ ಉದ್ದೇಶವೇ ಇಡೀ ಸಮಾಜ ಒಡೆಯುವುದು, ಮೀಸಲಾತಿ ಕಸಿಯುವುದು ಹಾಗೂ ಮತಾಂತರಕ್ಕೆ ಪ್ರಚೋದಿಸುವುದು ಆಗಿದೆ. ಸ್ವಾಮೀಜಿಗಳು ಇವತ್ತಿನ ಸಭೆಗೆ ಬರ್ತಾರೆ. ಸಿದ್ದರಾಮಯ್ಯನವ್ರು ಹೊಸ ಜಾತಿಗಳನ್ನು ಸೃಷ್ಟಿಸಿ ಶಾಶ್ವತ ಅಪರಾಧಿ ಆಗೋದು ಬೇಡ. ಇವತ್ತು ರಾಜ್ಯಪಾಲರಿಗೂ ಈ ಸಂಬ0ಧ ದೂರು ಕೊಡ್ತೇವೆ ಎಂದು ತಿಳಿಸಿದ್ದಾರೆ.
ಒಬಿಸಿ ವರ್ಗಗಳ ಮೀಸಲಾತಿ ಕಸಿಯುವ ಕೆಲಸಕ್ಕೆ ಮುಸುಕು ಹಾಕಿಕೊಂಡು ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ನಮ್ಮ ದೂರು, ಆಕ್ಷೇಪಣೆಗಳಿಗೆ ಹಿಂದುಳಿದ ವರ್ಗಗಳ ಆಯೋಗ ಕಿವಿಗೆ ಹಾಕಿಕೊಂಡಿಲ್ಲ. ಸರ್ಕಾರ ಅರಾಜಕತೆ ಸೃಷ್ಟಿಸಲು ಹೊರಟಿದೆ, ಇದಕ್ಕೆ ನಾವು ಬಿಡಲ್ಲ. ಇವತ್ತಿನ ಸಭೆ ನೂರಕ್ಕೂ ಹೆಚ್ಚು ಗಣ್ಯರು ಬರ್ತಾರೆ. ಮುಂದಿನ ಒಂದು ವಾರದಲ್ಲಿ ಹೋರಾಟ ಮಾಡ್ತೇವೆ. ರಾಜ್ಯಪಾಲರು ಮಧ್ಯಪ್ರವೇಶಕ್ಕೆ ಕೋರುತ್ತೇವೆ. ಈ ಹೊಸ ಜಾತಿಗಳ ಪಟ್ಟಿ ತೆಗೆಯುವಂತೆ ಸರ್ಕಾರಕ್ಕೆ ನಿರ್ದೇಶನ ಕೊಡಲು ರಾಜ್ಯಪಾಲರಿಗೂ ಭೇಟಿ ಮಾಡಿ ಮನವಿ ಮಾಡ್ತೇವೆ ಎಂದಿದ್ದಾರೆ.
ಕುರುಬ ಸಮಯದಾಯ ಎಸ್ಟಿಗೆ ಸೇರಿಸಲು ಇಂದು ಸಭೆ ವಿಚಾರವಾಗಿ ಮಾತನಾಡಿ, ಯಾವುದೇ ಜಾತಿಗೆ ಇನ್ನೊಂದು ಜಾತಿ ಸೇರಿಸಬೇಕು ಅಂದ್ರೆ ಕುಲಶಾಸ್ತ್ರೀಯ ಅಧ್ಯಯನ ಆಗಬೇಕು. ದೊಡ್ಡಮಟ್ಟದ ಚರ್ಚೆಗಳು ಆಗಬೇಕು. ಸಿದ್ದರಾಮಯ್ಯ ಕುರುಡು ಪ್ರೇಮ ತೋರಿಸಿ ಕುರುಬ ಸಮುದಾಯ ಎಸ್ಟಿಗೆ ಸೇರಿಸಲು ಹೊರಟಿದ್ದಾರೆ. ಆ ಮೂಲಕ ರಾಜ್ಯದ ಹಿತ ಮರೆತು ಸ್ವಹಿತ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…