Featured

ಸಿದ್ದರಾಮಯ್ಯನವ್ರು ಹೊಸ ಜಾತಿಗಳನ್ನು ಸೃಷ್ಟಿಸಿ ಶಾಶ್ವತ ಅಪರಾಧಿ ಆಗೋದು ಬೇಡ : ಶಾಸಕ ಸುನಿಲ್ ಕುಮಾರ್ – vishwanews24

ಒಬಿಸಿ ಜಾತಿಗಳ ಮೀಸಲಾತಿ ಕ್ರಿಶ್ಚಿಯನ್ನರು ಕಸಿಯುವ ಹುನ್ನಾರ : ಶಾಸಕ ಸುನಿಲ್ ಕುಮಾರ್  ಆರೋಪ

ಬೆಂಗಳೂರು: ಕ್ರಿಸ್ಚಿಯನ್ ಜೊತೆ 42 ಹಿಂದೂ ಉಪಚಾತಿಗಳನ್ನು ಸೇರಿಸಿ ಹೊಸ ಜಾತಿಗಳನ್ನು ಈ ಸರ್ಕಾರ ಸೃಷ್ಟಿ ಮಾಡಿದೆ ಎಂದು ಶಾಸಕ ಸುನಿಲ್ ಕುಮಾರ್  ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸುನಿಲ್ ಕುಮಾರ್ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ತರಾತುರಿಯಲ್ಲಿ ಜಾತಿ ಸಮೀಕ್ಷೆ ನಡೀತಿದೆ. ಹೊಸದಾಗಿ ಜಾತಿಗಳ ಪಟ್ಟಿ ಸೃಷ್ಟಿ ಮಾಡಿದ್ದಾರೆ. ಇವಕ್ಕೆ ಸರ್ಕಾರದ ಯಾವುದೇ ದಾಖಲೆಗಳಿಲ್ಲ. ಕ್ರಿಶ್ಚಿಯನ್ ಜತೆ 47 ಹಿಂದೂ ಉಪಜಾತಿಗಳನ್ನು ಸೇರಿಸಿ ಹೊಸ ಜಾತಿಗಳ ಸೃಷ್ಟಿ ಮಾಡಿದ್ದಾರೆ. ಇದರ ಪರಿಣಾಮ ಮತಾಂತರಕ್ಕೆ ಸರ್ಕಾರ ಪರೋಕ್ಷ ಬೆಂಬಲ ಕೊಡ್ತಿದೆ. ಮುಂದೆ ಹಿಂದುಳಿದ ವರ್ಗಗಳ ಮೀಸಲಾತಿ ಕಸಿಯುವ ಹುನ್ನಾರ ನಡೀತಿದೆ. ಒಬಿಸಿ ಜಾತಿಗಳ ಮೀಸಲಾತಿ ಕ್ರಿಶ್ಚಿಯನ್ನರು ಕಸಿಯುವ ಹುನ್ನಾರ ಇದು ಎಂದು ಆರೋಪಿಸಿದ್ದಾರೆ.

ಈ ಹಂತದಲ್ಲೇ ಇದನ್ನು ಚಿವುಟಿ ಹಾಕಬೇಕು. ಈ ನಿಟ್ಟಿನಲ್ಲಿ ಇವತ್ತು ದುಂಡುಮೇಜಿನ ಸಭೆ ನಡೆಸಿ ಮುಂದಿನ ಹಂತದ ಹೋರಾಟ, ಅಭಿಯಾನ ಬಗ್ಗೆ ಚರ್ಚೆ ಮಾಡ್ತೇವೆ. ಸರ್ಕಾರದ ಉದ್ದೇಶವೇ ಇಡೀ ಸಮಾಜ ಒಡೆಯುವುದು, ಮೀಸಲಾತಿ ಕಸಿಯುವುದು ಹಾಗೂ ಮತಾಂತರಕ್ಕೆ ಪ್ರಚೋದಿಸುವುದು ಆಗಿದೆ. ಸ್ವಾಮೀಜಿಗಳು ಇವತ್ತಿನ ಸಭೆಗೆ ಬರ್ತಾರೆ. ಸಿದ್ದರಾಮಯ್ಯನವ್ರು ಹೊಸ ಜಾತಿಗಳನ್ನು ಸೃಷ್ಟಿಸಿ ಶಾಶ್ವತ ಅಪರಾಧಿ ಆಗೋದು ಬೇಡ. ಇವತ್ತು ರಾಜ್ಯಪಾಲರಿಗೂ ಈ ಸಂಬ0ಧ ದೂರು ಕೊಡ್ತೇವೆ ಎಂದು ತಿಳಿಸಿದ್ದಾರೆ.

ಒಬಿಸಿ ವರ್ಗಗಳ ಮೀಸಲಾತಿ ಕಸಿಯುವ ಕೆಲಸಕ್ಕೆ ಮುಸುಕು ಹಾಕಿಕೊಂಡು ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ನಮ್ಮ ದೂರು, ಆಕ್ಷೇಪಣೆಗಳಿಗೆ ಹಿಂದುಳಿದ ವರ್ಗಗಳ ಆಯೋಗ ಕಿವಿಗೆ ಹಾಕಿಕೊಂಡಿಲ್ಲ. ಸರ್ಕಾರ ಅರಾಜಕತೆ ಸೃಷ್ಟಿಸಲು ಹೊರಟಿದೆ, ಇದಕ್ಕೆ ನಾವು ಬಿಡಲ್ಲ. ಇವತ್ತಿನ ಸಭೆ ನೂರಕ್ಕೂ ಹೆಚ್ಚು ಗಣ್ಯರು ಬರ್ತಾರೆ. ಮುಂದಿನ ಒಂದು ವಾರದಲ್ಲಿ ಹೋರಾಟ ಮಾಡ್ತೇವೆ. ರಾಜ್ಯಪಾಲರು ಮಧ್ಯಪ್ರವೇಶಕ್ಕೆ ಕೋರುತ್ತೇವೆ. ಈ ಹೊಸ ಜಾತಿಗಳ ಪಟ್ಟಿ ತೆಗೆಯುವಂತೆ ಸರ್ಕಾರಕ್ಕೆ ನಿರ್ದೇಶನ ಕೊಡಲು ರಾಜ್ಯಪಾಲರಿಗೂ ಭೇಟಿ ಮಾಡಿ ಮನವಿ ಮಾಡ್ತೇವೆ ಎಂದಿದ್ದಾರೆ.

ಕುರುಬ ಸಮಯದಾಯ ಎಸ್‌ಟಿಗೆ ಸೇರಿಸಲು ಇಂದು ಸಭೆ ವಿಚಾರವಾಗಿ ಮಾತನಾಡಿ, ಯಾವುದೇ ಜಾತಿಗೆ ಇನ್ನೊಂದು ಜಾತಿ ಸೇರಿಸಬೇಕು ಅಂದ್ರೆ ಕುಲಶಾಸ್ತ್ರೀಯ ಅಧ್ಯಯನ ಆಗಬೇಕು. ದೊಡ್ಡಮಟ್ಟದ ಚರ್ಚೆಗಳು ಆಗಬೇಕು. ಸಿದ್ದರಾಮಯ್ಯ ಕುರುಡು ಪ್ರೇಮ ತೋರಿಸಿ ಕುರುಬ ಸಮುದಾಯ ಎಸ್‌ಟಿಗೆ ಸೇರಿಸಲು ಹೊರಟಿದ್ದಾರೆ. ಆ ಮೂಲಕ ರಾಜ್ಯದ ಹಿತ ಮರೆತು ಸ್ವಹಿತ ತೋರುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಉಡುಪಿ : ನೇರ ಸಂದರ್ಶನ -vishwanews24

ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…

2 hours ago

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24

ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…

2 hours ago

ಉಡುಪಿ : ಎಸ್‌ಐಆರ್ ಹೆಸರಿನಲ್ಲಿ ಅವರ ಮತದಾನದ ಹಕ್ಕನ್ನು ಕಸಿಯುವ ಕೆಲಸವಾಗುತ್ತಿದೆ :ವಿನಯ ಕುಮಾರ್ ಸೊರಕೆ ಆರೋಪ – vishwanews24

ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…

2 hours ago

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

20 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

21 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

21 hours ago