ದಕ್ಷಿಣ ಕನ್ನಡ

ಸಿದ್ದರಾಮಯ್ಯನ ಅಹಂಕಾರವೇ ಕಾಂಗ್ರೇಸ್ ಗೆ ಮುಳುವಾಗಲಿದೆ : ಜನಾರ್ದನ ಪೂಜಾರಿ

ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಸಲಹೆಗಳನ್ನು ಕೊಟ್ಟಿದ್ದು ಹೌದು. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲ್ತಾರೆ ಎಂದಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ. ಈಗಲೂ ಹೇಳ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ. ಇಲ್ಲಾಂದ್ರೆ ಸೋಲುತ್ತಾರೆ, ಸಲಹೆ ಕೊಟ್ಟಿದ್ದು ಕಾಂಗ್ರೆಸ್ ಉಳಿವಿಗೆ. ಆದರೆ, ಸಿದ್ದರಾಮಯ್ಯ ಆಡಳಿತವನ್ನು ಒಳ್ಳೆದಾಗಿ ನಡೆಸಿದ್ದಾರೆ. ಮುಂದೇನು ಸಿದ್ರಾಮಯ್ಯರೇ ಸಿಎಂ ಆಗ್ತಾರೆ ಅಂತ ಹೇಳಿದ್ದಾರೆ.ಇದೇ ವೇಳೆ ಜೆ.ಆರ್ ಲೋಬೋ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಲೋಬೋ ಬಂಟ ಸಮಾಜದ ವಿರೋಧಿಯೆಂದು ಹೇಳುತ್ತಿದ್ದಾರೆ. ಅಲೋಶಿಯಸ್ ಕಾಲೇಜು ರಸ್ತೆಗೆ ಸುಂದರರಾಮ್ ಶೆಟ್ಟಿ ಹೆಸರಿಡುವ ವಿಚಾರದಲ್ಲಿ ಬಂಟರನ್ನು ಎತ್ತಿಕಟ್ಟುತ್ತಿದ್ದಾರೆ. ಬಂಟರಿಗೆ ಕಾಂಗ್ರೆಸ್ಸಿನಲ್ಲಿ ಸಾಕಷ್ಟು ಅವಕಾಶ ನೀಡಲಾಗಿದೆ. ವಿಜಯಾ ಬ್ಯಾಂಕಿನಲ್ಲಿ ಎಷ್ಟು ಮಂದಿ ಬಂಟರು ಅಧ್ಯಕ್ಷರಾಗಿಲ್ಲ. ಇಂಥ ಅಪಪ್ರಚಾರ ಏನಿದ್ದರೂ ಲೋಬೋ ಈ ಬಾರಿ ಗೆಲ್ತಾರೆ. ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬರುತ್ತದೆ ಅಂತ ಅವರು ತಿಳಿಸಿದ್ರು.

ಪೂಜಾರಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಎದ್ದು ಹೋಗಿದ್ದು, ಹರೀಶ್ ಕುಮಾರ್ ವಿರುದ್ಧ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಹರೀಶ್ ಕುಮಾರ್ ಯಾಕೆ ಎದ್ದು ಹೋದ್ರು? ನನಗಿಂತ ಚಿದಂಬರಂ ಮುಖ್ಯ ಆಯ್ತಾ? ಚಿದಂಬರಂ ಚುನಾವಣಾ ಸಮಯದಲ್ಲಿ ಮಾತ್ರ ಬರ್ತಾರೆ. ಚಿದಂಬರಂ ಮಾಡಿದ್ದನ್ನು ಬಿಜೆಪಿಯವರು ಹೇಳಿದ್ರೆ ಕಾಂಗ್ರೆಸ್ ಸರ್ವನಾಶ ಆಗ್ಬಹುದು. ಚಿದಂಬರಂ ಏನೆಲ್ಲ ಮಾಡಿಟ್ಟಿದ್ದಾರೆ ನಿಮಗೆ ಗೊತ್ತಾ? ಹರೀಶ್ ಕುಮಾರ್ ಯಾಕೆ ಇಲ್ಲಿ ಆಟ ಆಡೋಕೆ ಬಂದಿದ್ದಾ ಅಂತ ತುಳು ಭಾಷೆಯಲ್ಲೇ ಕಾಂಗ್ರೆಸ್ ಮುಖಂಡರನ್ನು ಗದರಿಸಿದ್ರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

7 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

7 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

7 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

8 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

8 hours ago