ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಸಲಹೆಗಳನ್ನು ಕೊಟ್ಟಿದ್ದು ಹೌದು. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲ್ತಾರೆ ಎಂದಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ. ಈಗಲೂ ಹೇಳ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ. ಇಲ್ಲಾಂದ್ರೆ ಸೋಲುತ್ತಾರೆ, ಸಲಹೆ ಕೊಟ್ಟಿದ್ದು ಕಾಂಗ್ರೆಸ್ ಉಳಿವಿಗೆ. ಆದರೆ, ಸಿದ್ದರಾಮಯ್ಯ ಆಡಳಿತವನ್ನು ಒಳ್ಳೆದಾಗಿ ನಡೆಸಿದ್ದಾರೆ. ಮುಂದೇನು ಸಿದ್ರಾಮಯ್ಯರೇ ಸಿಎಂ ಆಗ್ತಾರೆ ಅಂತ ಹೇಳಿದ್ದಾರೆ.
ಪೂಜಾರಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಎದ್ದು ಹೋಗಿದ್ದು, ಹರೀಶ್ ಕುಮಾರ್ ವಿರುದ್ಧ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಹರೀಶ್ ಕುಮಾರ್ ಯಾಕೆ ಎದ್ದು ಹೋದ್ರು? ನನಗಿಂತ ಚಿದಂಬರಂ ಮುಖ್ಯ ಆಯ್ತಾ? ಚಿದಂಬರಂ ಚುನಾವಣಾ ಸಮಯದಲ್ಲಿ ಮಾತ್ರ ಬರ್ತಾರೆ. ಚಿದಂಬರಂ ಮಾಡಿದ್ದನ್ನು ಬಿಜೆಪಿಯವರು ಹೇಳಿದ್ರೆ ಕಾಂಗ್ರೆಸ್ ಸರ್ವನಾಶ ಆಗ್ಬಹುದು. ಚಿದಂಬರಂ ಏನೆಲ್ಲ ಮಾಡಿಟ್ಟಿದ್ದಾರೆ ನಿಮಗೆ ಗೊತ್ತಾ? ಹರೀಶ್ ಕುಮಾರ್ ಯಾಕೆ ಇಲ್ಲಿ ಆಟ ಆಡೋಕೆ ಬಂದಿದ್ದಾ ಅಂತ ತುಳು ಭಾಷೆಯಲ್ಲೇ ಕಾಂಗ್ರೆಸ್ ಮುಖಂಡರನ್ನು ಗದರಿಸಿದ್ರು.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…