ಮಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಪ್ರತೀ ಬಾರಿಯೂ ಗುಡುಗುತ್ತಿರುವ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರು ಈ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.
ನಗರದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯರಿಗೆ ಸಲಹೆಗಳನ್ನು ಕೊಟ್ಟಿದ್ದು ಹೌದು. ದುರಹಂಕಾರಿ ಮನೋಭಾವ ಬದಲಿಸದಿದ್ದರೆ ಸೋಲ್ತಾರೆ ಎಂದಿದ್ದೆ. ಪಕ್ಷಕ್ಕಿಂತ ತಾನೇ ದೊಡ್ಡವನೆಂದು ನಡೆದುಕೊಂಡರೆ ಉಳಿಗಾಲವಿಲ್ಲ. ಈಗಲೂ ಹೇಳ್ತೇನೆ, ದುರಹಂಕಾರ ಬಿಟ್ಟರೆ ಸಿದ್ದರಾಮಯ್ಯ ಉಳೀತಾರೆ. ಇಲ್ಲಾಂದ್ರೆ ಸೋಲುತ್ತಾರೆ, ಸಲಹೆ ಕೊಟ್ಟಿದ್ದು ಕಾಂಗ್ರೆಸ್ ಉಳಿವಿಗೆ. ಆದರೆ, ಸಿದ್ದರಾಮಯ್ಯ ಆಡಳಿತವನ್ನು ಒಳ್ಳೆದಾಗಿ ನಡೆಸಿದ್ದಾರೆ. ಮುಂದೇನು ಸಿದ್ರಾಮಯ್ಯರೇ ಸಿಎಂ ಆಗ್ತಾರೆ ಅಂತ ಹೇಳಿದ್ದಾರೆ.
ಪೂಜಾರಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತೆಯೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಎದ್ದು ಹೋಗಿದ್ದು, ಹರೀಶ್ ಕುಮಾರ್ ವಿರುದ್ಧ ಜನಾರ್ದನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು. ಹರೀಶ್ ಕುಮಾರ್ ಯಾಕೆ ಎದ್ದು ಹೋದ್ರು? ನನಗಿಂತ ಚಿದಂಬರಂ ಮುಖ್ಯ ಆಯ್ತಾ? ಚಿದಂಬರಂ ಚುನಾವಣಾ ಸಮಯದಲ್ಲಿ ಮಾತ್ರ ಬರ್ತಾರೆ. ಚಿದಂಬರಂ ಮಾಡಿದ್ದನ್ನು ಬಿಜೆಪಿಯವರು ಹೇಳಿದ್ರೆ ಕಾಂಗ್ರೆಸ್ ಸರ್ವನಾಶ ಆಗ್ಬಹುದು. ಚಿದಂಬರಂ ಏನೆಲ್ಲ ಮಾಡಿಟ್ಟಿದ್ದಾರೆ ನಿಮಗೆ ಗೊತ್ತಾ? ಹರೀಶ್ ಕುಮಾರ್ ಯಾಕೆ ಇಲ್ಲಿ ಆಟ ಆಡೋಕೆ ಬಂದಿದ್ದಾ ಅಂತ ತುಳು ಭಾಷೆಯಲ್ಲೇ ಕಾಂಗ್ರೆಸ್ ಮುಖಂಡರನ್ನು ಗದರಿಸಿದ್ರು.
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…