ತುಮಕೂರು: ’ಸಿದ್ದರಾಮಯ್ಯ ಅವರಂತಹ ಜನನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅವಶ್ಯ. ಅವರನ್ನು ಕಡೆಗಣಿಸಿದರೆ ಕಾಂಗ್ರೆಸ್ ಪಕ್ಷ ‘ಸೊನ್ನೆ’ ಆಗುತ್ತದೆ’ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಎಚ್ಚರಿಕೆ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ‘ಕೆಲವರು ಲಾಬಿ ನಡೆಸಿ ಲೀಡರ್ ಆಗಲು ಹೊರಟಿದ್ದಾರೆ. ಅಂಥವರಿಗೆ ಚುನಾವಣೆಗಳಲ್ಲಿ ಹತ್ತು ಮತ ಹಾಕಿಸುವ ಯೋಗ್ಯತೆಯೂ ಇರುವುದಿಲ್ಲ’ ಎಂದರು.
‘ಉದಾಹರಣೆಗೆ ನಮ್ಮ ಜಿಲ್ಲೆಯವನು ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾನೆ. ಅವನೇನಾದರೂ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಮಾಧಿಯಾಗುತ್ತದೆ’ ಎಂದು ಡಾ.ಜಿ.ಪರಮೇಶ್ವರ ವಿರುದ್ಧ ಪರೋಕ್ಷವಾಗಿ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು.
’ಅನರ್ಹ ಶಾಸಕರ ಮನನೊಯಿಸಿದರೆ ಬಿಜೆಪಿಗೆ ಶಾಪ ತಟ್ಟಲಿದೆ. ಬಿಜೆಪಿ ಸರ್ಕಾರ ಬಂದಿರೋದೆ ಅವರಿಂದ. ಅವರಿಗೆ ನೋವು ಮಾಡುವ ಪ್ರಯತ್ನ ಬಿಜೆಪಿಯವರು ಮಾಡಬಾರದು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರಿಗೆ ನೀಡಿದ ಆಶ್ವಾಸನೆಗಳನ್ನು ಉಳಿಸಿಕೊಳ್ಳಬೇಕು’ ಎಂದರು.
ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…
ಉಡುಪಿ: ಏ.1ರಂದು ಪಿಂಕ್ ಸೂಪರ್ ಮೂನ್ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…
ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…
ಮಂಗಳೂರು : 2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…
ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…