ತುಮಕೂರು: ’ಸಿದ್ದರಾಮಯ್ಯ ಅವರಂತಹ ಜನನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅವಶ್ಯ. ಅವರನ್ನು ಕಡೆಗಣಿಸಿದರೆ ಕಾಂಗ್ರೆಸ್ ಪಕ್ಷ ‘ಸೊನ್ನೆ’ ಆಗುತ್ತದೆ’ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಎಚ್ಚರಿಕೆ ನೀಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ‘ಕೆಲವರು ಲಾಬಿ ನಡೆಸಿ ಲೀಡರ್ ಆಗಲು ಹೊರಟಿದ್ದಾರೆ. ಅಂಥವರಿಗೆ ಚುನಾವಣೆಗಳಲ್ಲಿ ಹತ್ತು ಮತ ಹಾಕಿಸುವ ಯೋಗ್ಯತೆಯೂ ಇರುವುದಿಲ್ಲ’ ಎಂದರು.
‘ಉದಾಹರಣೆಗೆ ನಮ್ಮ ಜಿಲ್ಲೆಯವನು ವಿರೋಧ ಪಕ್ಷದ ನಾಯಕನಾಗಲು ಹೊರಟಿದ್ದಾನೆ. ಅವನೇನಾದರೂ ವಿರೋಧ ಪಕ್ಷದ ನಾಯಕನಾದರೆ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸಮಾಧಿಯಾಗುತ್ತದೆ’ ಎಂದು ಡಾ.ಜಿ.ಪರಮೇಶ್ವರ ವಿರುದ್ಧ ಪರೋಕ್ಷವಾಗಿ ಏಕ ವಚನದಲ್ಲಿಯೇ ವಾಗ್ದಾಳಿ ನಡೆಸಿದರು.
’ಅನರ್ಹ ಶಾಸಕರ ಮನನೊಯಿಸಿದರೆ ಬಿಜೆಪಿಗೆ ಶಾಪ ತಟ್ಟಲಿದೆ. ಬಿಜೆಪಿ ಸರ್ಕಾರ ಬಂದಿರೋದೆ ಅವರಿಂದ. ಅವರಿಗೆ ನೋವು ಮಾಡುವ ಪ್ರಯತ್ನ ಬಿಜೆಪಿಯವರು ಮಾಡಬಾರದು. ಗೌರವಯುತವಾಗಿ ನಡೆಸಿಕೊಳ್ಳಬೇಕು. ಅವರಿಗೆ ನೀಡಿದ ಆಶ್ವಾಸನೆಗಳನ್ನು ಉಳಿಸಿಕೊಳ್ಳಬೇಕು’ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…