Featured

ಸಿದ್ದರಾಮಯ್ಯ ಅವರಿಗೆ ಅವಮಾನ ಮಾಡಿರುವುದಕ್ಕಾಗಿ ಬಿಜೆಪಿ ನಾಯಕರ ವಿರುದ್ದ ಪ್ರಕರಣ  : ವೆರೋನಿಕಾ ಕರ್ನೆಲಿಯೋ – vishwanews24

ಪ್ರತಿಭಟನೆ ನ್ಯಾಯಯುತವಾಗಿ ನಡೆಸಿದರೆ ಯಾರೂ ವಿರೋಧ ವ್ಯಕ್ತಪಡಿಸುವುದಿಲ್ಲ ..

ಸಿದ್ದರಾಮಯ್ಯ ಅವರ ಪ್ರತಿಕೃತಿ ರಚಿಸಿ ಚಪ್ಪಲಿಯಿಂದ ಹೊಡೆದು ಅವಮಾನಿಸುವುದು ಸರಿಯಾದ ಕ್ರಮವಲ್ಲ  : ವೆರೋನಿಕಾ ಕರ್ನೆಲಿಯೋ

ಉಡುಪಿ: ಪ್ರತಿಭಟನೆಯ ನೆಪದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಅವಮಾನ ಮಾಡಿರುವುದಕ್ಕಾಗಿ ಬಿಜೆಪಿ ನಾಯಕರ ವಿರುದ್ದ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದು ಕಾನೂನು ಎಲ್ಲರಗೂ ಒಂದೇ ಎನ್ನುವುದನ್ನು ಇನ್ನಾದರೂ ಬಿಜೆಪಿಗರು ಆರ್ಥಮಾಡಿಕೊಳ್ಳಲಿ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.

ಪ್ರತಿಭಟಿಸಲು ಪ್ರತಿಯೊಬ್ಬ ಭಾರತೀಯನಿಗೆ ಅವಕಾಶವಿದ್ದು ಅದು ನ್ಯಾಯಯುತವಾದ ರೀತಿಯಲ್ಲಿ ನಡೆಸಿದರೆ ಯಾರೂ ಕೂಡ ಅದಕ್ಕೆ ವಿರೋಧವನ್ನು ವ್ಯಕ್ತಪಡಿಸುವುದಿಲ್ಲ. ಈ ಹಿಂದೆಯೂ ಕೂಡ ಬಿಜೆಪಿಗರು ಹಲವಾರು ಪ್ರತಿಭಟನೆಗಳನ್ನು ನಡೆಸಿದ್ದು ಆ ಎಲ್ಲಾ ಸಮಯದಲ್ಲಿ ಅವರುಗಳ ಮೇಲೆ ಪ್ರಕರಣ ದಾಖಲಿಸಲಾಗಿದೆಯೇ? ರಾಜ್ಯವನ್ನು ಆಳುತ್ತಿರುವ ಮುಖ್ಯಮಂತ್ರಿ ಒಂದು ಗೌರವದ ಹುದ್ದೆಯಲ್ಲಿದ್ದಾಗ ಅವರ ಪ್ರತಿಕೃತಿ ರಚಿಸಿ ಚಪ್ಪಲಿಯಿಂದ ಹೊಡೆದು ಅವಮಾನಿಸುವುದು ಸರಿಯಾದ ಕ್ರಮವಲ್ಲ. ಸ್ಥಳದಲ್ಲಿ ಉಪಸ್ಥಿತರಿದ್ದ ಶಾಸಕರು ಇದನ್ನು ಕಂಡು ಕುರುಡರಂತೆ ವರ್ತಿಸುವ ಬದಲು ತಡೆಯುವ ಕೆಲಸ ಮಾಡಬೇಕಾಗಿತ್ತು ಅದನ್ನು ಬಿಟ್ಟು ತನ್ನ ಕಾರ್ಯಕರ್ತರು ಮಾಡಿದ್ದೆ ಸರಿ ಎಂಬಂತೆ ವರ್ತಿಸಿರುವುದು ಸರಿಯಾದ ವರ್ತನೆಯಲ್ಲ.

ಈ ಹಿಂದೆ ಹಲವಾರು ಪ್ರಕರಣಗಳಲ್ಲಿ ಬಿಜೆಪಿ ಆಡಳಿತದಲ್ಲಿರುವ ಮುಖ್ಯಮಂತ್ರಿಗಳನ್ನು ಅವಮಾನಿಸಿದವರ ವಿರುದ್ದ ಕೂಡ ಪ್ರಕರಣಗಳನ್ನು ದಾಖಲಿಸಿರುವುದು ಬಿಜೆಪಿಗರು ಮರೆತಂತೆ ಕಾಣುತ್ತಿದೆ. ಇದರಲ್ಲಿ ಕಾಂಗ್ರೆಸ್ ಯಾವುದೇ ದ್ವೇಷ ರಾಜಕಾರಣ ಮಾಡಲು ಹೊರಟಿಲ್ಲ ಬದಲಾಗಿ ಕಾನೂನಿನ ಪ್ರಕಾರ ಒರ್ವ ಮುಖ್ಯಮಂತ್ರಿಯನ್ನು ಅವಮಾನಿಸಿರುವುದು ಪಕ್ಷದ ಕಾರ್ಯಕರ್ತರಿಗೆ ನೋವು ತಂದಿದ್ದು ಅದಕ್ಕಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಅದರಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಇದನ್ನು ತಿರುಚಿ ಬಿಜೆಪಿಗರು ಇದಕ್ಕೆ ಬೇರೆಯೇ ಅರ್ಥ ನೀಡುತ್ತಿರುವುದು ಹಾಸ್ಯಾಸ್ಪದ ಸಂಗತಿಯಾಗಿದೆ,

ಸದಾ ಸಂಸ್ಕೃತಿ ಸಭ್ಯತೆಯ ಪಾಠ ಹೇಳುವು ಬಿಜೆಪಿಗರು ಮಾಡುವ ಎಲ್ಲಾ ಪುಂಡಾಟಗಳನ್ನು ಕಣ್ಣು ಮುಚ್ಚಿ ಒಪ್ಪಲು ಕಾಂಗ್ರೆಸ್ ಪಕ್ಷ ಹಾಗೂ ಅದರ ಕಾರ್ಯಕರ್ತರು ಕೈಗೆ ಬಳೆ ತೊಟ್ಟು ಕುಳಿತಿಲ್ಲ. ಸೂಕ್ತ ಸಮಯದಲ್ಲಿ ಕಾನೂನಿನ ಮೂಲಕ ಸೂಕ್ತ ಉತ್ತರವನ್ನು ನೀಡುವ ಕೆಲಸವನ್ನು ಪಕ್ಷ ಮಾಡಲಿದೆ. ಶಾಸಕರನ್ನು ಆಯ್ಕೆ ಮಾಡಿದ ಜನರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಶಾಸಕರು ಹಾಗೂ ನಗರಸಭಾ ಸದಸ್ಯರು ಮೊದಲು ಮಾಡಲಿ ಕೇವಲ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ಕೆಲಸ ಮಾಡಿ ತೋರಿಸುವ ತಾಕತ್ತನ್ನು ಶಾಸಕರು ತೋರಿಸಬೇಕಾಗಿದೆ. ಅವರ ಕ್ಷೇತ್ರದಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ಒರ್ವ ಶಾಸಕರದ್ದಾಗಿದ್ದು ಅದನ್ನು ಮರೆತು ಬೇರೆಲ್ಲಾ ಕೆಲಸಗಳಿಗೆ ಕೈ ಹಾಕುವ ಬದಲು ಒರ್ವ ಮಾದರಿ ಶಾಸಕರಾಗುವತ್ತ ಗಮನ ಹರಿಸಲಿ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago