ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಿದ್ದೇವೆ. ಈ ಬಗ್ಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಧರ್ಮ ಪಶ್ಚಾತ್ತಾಪ ವಿಚಾರದಲ್ಲಿ ಸಿದ್ದು ಯೂಟರ್ನ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ, ಸ್ವಾಮೀಜಿ ಮತ್ತು ಸಿದ್ದರಾಮಯ್ಯ ನಡುವೆ ನಡೆದಿರುವ ಸಂಭಾಷಣೆ ಇದ್ದಾಗಿದ್ದು, ಆ ಬಗ್ಗೆ ನಾನು ಮಾತನಾಡಲ್ಲ. ಸಿದ್ದರಾಮಯ್ಯ ನಿನ್ನೆ ಒಂದು. ಇಂದು ಒಂದು ಮಾತನಾಡಿದ್ದಾರೆ. ಸತ್ಯ ಜಗತ್ತಿಗೆ ಗೊತ್ತು ಎಂದು ವಾಗ್ದಾಳಿ ನಡೆಸಿದರು.
ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಸಂಬಂಧ ವಿಧಾನಸೌಧದ ದೇವರಾಜ ಅರಸು ಪ್ರತಿಮೆ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂದು ಕರ್ನಾಟಕ ಕಂಡಂತಹ ಧೀಮಂತ ನಾಯಕ, ಹಿಂದುಳಿದವರ ನಾಯಕ ದೇವರಾಜ ಅರಸ್ ಅವರು ತಮ್ಮದೇ ಆದಂತಹ ಸೇವೆಯನ್ನ ಮಾಡಿ ಜನಮನ ಗೆದ್ದಿದ್ದಾರೆ. ಅವರಿಗೆ ಬಡವರ ಬಗ್ಗೆ ಕಳಕಳಿ ಇತ್ತು, ಹಿಂದುಳಿದವರ ನಾಯಕ ಅವರಾಗಿದ್ದರು. ಹಿಂದುಳಿದ ವರ್ಗದವರ ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸೇವೆ ಮಾಡಿದವರು. ಭೂ ಸುಧಾರಣೆ ಬಗ್ಗೆ ಅತೀ ಮೊದಲು ಚಿಂತನೆ ಮಾಡಿ ಕಾರ್ಯರೂಪಕ್ಕೆ ತಂದ ಶ್ರೇಯಸ್ಸು ಅವರಗಿದೆ ಎಂದರು.
ಈ ವೇಳೆ ಸಮಾಜ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಚಿವ ಅಶ್ವತ್ಥನಾರಾಯಣ್ ಸೇರಿದಂತೆ ಕೆಲ ಶಾಸಕರು, ಪರಿಷತ್ ಸದಸ್ಯರು ಉಪಸ್ಥಿತರಾದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…