ಹಾಸನ : ‘ಮುಂದಿನ ದಿನಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಭ ಸೂಚನೆ ಸಿಗಲಿದೆ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಗಂಗೆಮಡುವಿನಲ್ಲಿ ಮಾತನಾಡಿದ ಅವರು, ಬರುವ ದಿನಗಳಲ್ಲಿ ಸಿದ್ದರಾಮಯ್ಯಗೆ ಶುಭ ಸೂಚನೆ ಇದೆ. ಹಿಂದೆ ಬಾದಾಮಿಗೆ ಬನ್ನಿ ಎಂದು ನಾನೇ ಕರೆದಿದ್ದೆ. ಆದರೆ, ಅವರು ಇಲ್ಲೇ ಗೆಲ್ಲುವೆ ಎಂದು ಹೇಳಿದರು. ಕೊನೆಗೆ ಬಂದರು. ಮತ್ತೆ ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ಸಿದ್ದರಾಮಯ್ಯ ನೀವು ಈಗಾಗಲೇ ರಾಜ್ಯದ ಗದ್ದುಗೆ ಹಿಡಿದಿದ್ದೀರಿ. ಇನ್ಮುಂದೆ ನೀವು ದೆಹಲಿಯ ಗದ್ದುಗೆ ಹಿಡಿಯಿರಿ. ದೆಹಲಿ ಕಡೆ ನೋಡಿ ಎಂದು ಸೂಚಿಸಿದ್ದೇನೆ ಎಂದು ಕೋಡಿ ಶ್ರೀ ಸೂಚನೆ ನೀಡಿದ್ದಾರೆ.
ಹಾಲುಮತ ಸಮಾಜದವರು ಇಡೀ ಭಾರತದಾದ್ಯಂತ ಎಲ್ಲ ರಾಜ್ಯಗಳಲ್ಲಿ ನೆಲೆಸಿದ್ದಾರೆ. ನಾನು ಹಿಂದೆಯೇ ಹೇಳಿದ್ದೆ ಕಂಬಳಿ ಹಾಸೀತು ಹಂಬಳಿ ಹಳಸೀತು, ಸಿದ್ದು ಗದ್ದುಗೆ ಹಾಸೀತು ಎಂದು. ಆಗ ಸಿದ್ದರಾಮಯ್ಯ ರಾಜ್ಯದ ಸಿಎಂ ಆಗಿದ್ದರು ನನ್ನ ಮಾತು ಸುಳ್ಳಾಗಲಿಲ್ಲ. ಈಗ ಮತ್ತೆ ಸಿದ್ದರಾಮಯ್ಯಗೆ ಶುಭಸೂಚನೆ ಇದೆ ಎಂದು ತಿಳಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…