ಚಿಕ್ಕಮಗಳೂರು: ಸದನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿಯಲ್ಲಿ 11 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದಿದ್ದಾರೆ. ಸರ್ಕಾರ ಇನ್ನೂ 11 ಕೋಟಿ ರೂ. ಬಿಡುಗಡೆಯೇ ಮಾಡಿಲ್ಲ. ಹಣ ಬಿಡುಗಡೆ ಮಾಡದೇ ಅವ್ಯವಹಾರ ಹೇಗೆ ಆಗುತ್ತೆ ಎಂದು ಶಾಸಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಈ ವೇಳೆ ಹಗರಣ ಪ್ರಕರಣ ಮುಚ್ಚಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿದ್ದಾರೆ. ನಾನು ಹಗರಣ ಮಾಡಿದ್ದೇನೆ. ನಿಮ್ಮ ಹಗರಣ ತೆಗಿತೀನಿ ಎನ್ನುವ ವರಸೆಯಲ್ಲಿ ಅವರು ಮಾತನಾಡುತ್ತಿದ್ದು, ಬ್ಲ್ಯಾಕ್ ಮೇಲ್ ತಂತ್ರಕ್ಕೆ ಮುಂದಾಗಿರುವುದು ಆಶ್ಚರ್ಯ ಮತ್ತು ಹಾಸ್ಯಾಸ್ಪದವಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ವಾಲ್ಮೀಕಿ, ಮೂಡಾ ಹಗರಣ ಬರುವ ತನಕ ಬಿಜೆಪಿ ಹಗರಣ ನಿಮಗೆ ಗೊತ್ತಿರಲಿಲ್ವಾ? ನಿಮ್ಮದೇ ಸರ್ಕಾರ ಇರುವಾಗ ಇಲ್ಲಿಯವರೆಗೂ ಯಾಕೆ ತನಿಖೆ ಮಾಡಲಿಲ್ಲ? ನಿಮ್ಮ ಕಾಲಬುಡಕ್ಕೆ ಬಂದಾಗ ಬಿಜೆಪಿ ಬಗ್ಗೆ ಹೇಳುತ್ತಿದ್ದೀರಿ. ಸಿಎಂ ಸದನದ ಒಳಗೆ ಎಷ್ಟೊಂದು ಸುಳ್ಳು ಹೇಳಿದ್ದಾರೆ. ಸದನದ ಒಳಗೆ ಇಷ್ಟು ಸುಳ್ಳು ಹೇಳುವ ಮುಖ್ಯಮಂತ್ರಿಯನ್ನು ಎಂದು ಕಂಡಿಲ್ಲ. ಅವ್ಯವಹಾರ ಆಗಿದ್ದರೆ ಯಾವ ತನಿಖೆಯನ್ನು ಬೇಕಾದರೂ ಮಾಡಲಿ. ಸಿಬಿಐ, ಇಂಟರ್ ಪೋಲ್, ಸಿಐಡಿ ಯಾವುದೇ ತನಿಖೆ ಬೇಕಾದರೂ ಮಾಡಿ ಎಂದು ಅವರು ಸವಾಲು ಹಾಕಿದ್ದಾರೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…