ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಶಾಸಕರ ಕನಸು ,ಇದಕ್ಕಾಗಿ ಎಲ್ಲರೂ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ’ : ಶಾಸಕ ಜೆ.ಎನ್‌. ಗಣೇಶ್‌

Featured, ರಾಜ್ಯ ನ್ಯೂಸ್

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಗಳಾಗಬೇಕು ಎನ್ನುವುದು ಕಾಂಗ್ರೆಸ್‌ ಪಕ್ಷದ 50 ಶಾಸಕರ ಕನಸು ಆಗಿದ್ದು, ಇದಕ್ಕಾಗಿ ಯಾವುದೇ ತ್ಯಾಗಕ್ಕೂ ಎಲ್ಲರೂ ಸಿದ್ಧರಿದ್ದೇವೆ’ ಎಂದು ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದರು.

ಪಟ್ಟಣದಲ್ಲಿ ಬುಧವಾರ ಹಾಲುಮತ ಸಮಾಜದವರು ಹಮ್ಮಿಕೊಂಡಿದ್ದ ಕನಕದಾಸರ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘2019ರ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್‌ ಶಾಸಕರ ಆಶಯದಂತೆ ಮುಖ್ಯಮಂತ್ರಿ ಬದಲಾವಣೆ ಸಾಧ್ಯತೆ ಇದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಮ್ಮಿಶ್ರ ಸರ್ಕಾರದ ಪತನವನ್ನೆ ಕಾಯುತ್ತಿರುವ ರಾಜಕೀಯ ವ್ಯಕ್ತಿಗಳ ಸಣ್ಣ ಮಾತು ಕೂಡ ದೊಡ್ಡ ಅಸ್ತ್ರವಾಗುತ್ತಿದೆ.ಸಮ್ಮಿಶ್ರ ಸರ್ಕಾರದಲ್ಲಿ ಹಲವು ಶಾಸಕರು ಸಚಿವ ಆಕಾಂಕ್ಷಗಳಾಗಿ ಕಾಯುತ್ತಿದ್ದು ಸಂಪುಟ ವಿಸ್ತರಣೆಯ ದಿನವನ್ನೇ ಎದುರು ನೋಡುತ್ತಿದ್ದಾರೆ.ಈ ಮಧ್ಯೆ ಡಿ.22ಕ್ಕೆ ಸಂಪುಟ ವಿಸ್ತರಣೆ ಮಾಡಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆ ನಿರ್ಧರಿಸಿದ ಬೆನ್ನಲ್ಲೇ ಕಂಪ್ಲಿ ಕಾಂಗ್ರೆಸ್‌ ಶಾಸಕ ಗಣೇಶ್‌ ಅವರು ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ಇರಿಸುಮುರಿಸು ಉಂಟು ಮಾಡಿದ್ದಾರೆ.

ಡಿಸೆಂಬರ್‌ 22 ರಂದು ಸಂಪುಟ ವಿಸ್ತರಣೆ ಆಗುವುದಿಲ್ಲ. ಹಲವು ಜನರಿಗೆ ಅಸಮಾಧಾನ ಇದೆ, ಹೀಗಾಗಿ ಲೋಕಸಭಾ ಚುನಾವಣೆ ವರೆಗೆ ಸಂಪುಟ ವಿಸ್ತರಣೆ ಆಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಸ್ಕೃತ ಪಾಠಶಾಲೆ ಅಧ್ಯಕ್ಷ ಎಸ್.ಎಸ್.ಎಂ. ಚನ್ನಯ್ಯಸ್ವಾಮಿ ಹಾಜರಿದ್ದರು.

vishwanews24