ಬೆಂಗಳೂರು: “ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್ ಶಾಸಕರ ಬ್ರೈನ್ ವಾಶ್ ಮಾಡುತ್ತಿದ್ದು, ಜೆಡಿಎಸ್ ಅನ್ನು ಮುಗಿಸಬೇಕು ಎನ್ನುವ ಹುನ್ನಾರ ಅವರದ್ದು” ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮ ಪಕ್ಷದ ಸದಸ್ಯರನ್ನು ಸಿದ್ದರಾಮಯ್ಯ ಅವರು ಸಂಪರ್ಕಿಸಿದ್ದು, ಬ್ರೈನ್ ವಾಶ್ ಮಾಡಿ ಹೈಜಾಕ್ ಮಾಡಲು ಯತ್ನಿಸುತ್ತಿದ್ದಾರೆ” ಎಂದು ದೂರಿದ್ದಾರೆ.
“ನಮ್ಮ ಬಗ್ಗೆ ಸುಖಾಸುಮ್ಮನೆ ಆರೋಪ ಮಾಡುವುದು ಬೇಡ. ಜೆಡಿಎಸ್ನಿಂದ ಶಕ್ತಿ ಪಡೆದುಕೊಂಡು ನಮ್ಮ ಕುರಿತು ಮಾತನಾಡುವ ಅವಶ್ಯಕತೆ ಇಲ್ಲ. ಪಕ್ಷ ಬಿಡಲು ಯಾರು ಒಂದು ಹೆಜ್ಜೆ ಇಟ್ಟಿದ್ದಾರೆ. ಯಾರು ಎರಡೂ ಕಾಲು ಆಚೆ ಇಟ್ಟಿದ್ದಾರೆ ಎನ್ನುವುದು ತಿಳಿದಿದೆ” ಎಂದಿದ್ದಾರೆ.
“ಅಭ್ಯರ್ಥಿಗಳ ಪಟ್ಟಿಯನ್ನು ನಾನು ಮೊದಲೇ ಪ್ರಕಟಿಸಲಿದ್ದು, ಜನವರಿ 2022ರಲ್ಲಿ ಪ್ರಕಟಿಸಲಾಗುತ್ತದೆ. ಇದರಿಂದ ಹೊಸಬರಿಗೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಸಮಯ ಸಿಕ್ಕಂತಾಗುತ್ತದೆ” ಎಂದು ತಿಳಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…