Featured

ಸಿದ್ದರಾಮಯ್ಯ  ನಂತರವೇ ಡಿಕೆಶಿ ಮುಖ್ಯಮಂತ್ರಿಯಾಗಬೇಕು ಆಗಬೇಕು, ಅದು ನಮ್ಮ ಬೇಡಿಕೆ : ಜಮೀರ್ ಅಹ್ಮದ್ ಖಾನ್ – vishwanews24

ಸಿದ್ದರಾಮಯ್ಯನವರು ಸಿಎಂ ಪೂರ್ಣಾವಧಿ ಮುಗಿಸುತ್ತಾರೆ, ಅವರ ನಂತರ ಡಿಕೆಶಿ ಆಗಬೇಕು : ಜಮೀರ್ ಅಹ್ಮದ್ ಖಾನ್

ಕೋಲಾರ: ಸಿಎಂ ಸಿದ್ದರಾಮಯ್ಯ 2028 ರವರೆಗೆ ಪೂರ್ಣ ಅವಧಿಗೆ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.

ಕೋಲಾರದ ಶ್ರೀನಿವಾಸಪುರದ ಲಕ್ಷ್ಮಿಪುರದಲ್ಲಿ ನೂರಾನಿ ಮಸೀದಿಯನ್ನು ಉದ್ಘಾಟಿಸಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಡಿ ಕೆ ಶಿವಕುಮಾರ್ ಅವರ ಕಾಂಗ್ರೆಸ್ ನಿಷ್ಠೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಶಿವಕುಮಾರ್ ಅವರ ರಕ್ತದಲ್ಲಿ ಹರಿಯುತ್ತದೆ. ನಮ್ಮಲ್ಲಿ ಹಲವರು ಬೇರೆ ಬೇರೆ ಪಕ್ಷಗಳಿಂದ ಬಂದಿದ್ದೇವೆ, ಆದರೆ ಕಾಂಗ್ರೆಸ್ ಡಿ ಕೆ ಶಿವಕುಮಾರ್ ಅವರ ರಕ್ತದಲ್ಲಿದೆ. ರಕ್ತವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಾಯಕತ್ವ ಬದಲಾವಣೆಯ ಬಗ್ಗೆ ಪದೇ ಪದೇ ವದಂತಿಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದಾಗ, ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಮತ್ತು ಈಗ ಜನವರಿ ಸಂಕ್ರಾಂತಿ ಬಗ್ಗೆ ಮಾತನಾಡಿದವರು ಏನೂ ಆಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೈಕಮಾಂಡ್ ಸಿದ್ದರಾಮಯ್ಯ ಜೊತೆಗಿದೆ ಎಂದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

8 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

9 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

9 hours ago