Featured

ಸಿದ್ದರಾಮಯ್ಯ  ನಂತರವೇ ಡಿಕೆಶಿ ಮುಖ್ಯಮಂತ್ರಿಯಾಗಬೇಕು ಆಗಬೇಕು, ಅದು ನಮ್ಮ ಬೇಡಿಕೆ : ಜಮೀರ್ ಅಹ್ಮದ್ ಖಾನ್ – vishwanews24

ಸಿದ್ದರಾಮಯ್ಯನವರು ಸಿಎಂ ಪೂರ್ಣಾವಧಿ ಮುಗಿಸುತ್ತಾರೆ, ಅವರ ನಂತರ ಡಿಕೆಶಿ ಆಗಬೇಕು : ಜಮೀರ್ ಅಹ್ಮದ್ ಖಾನ್

ಕೋಲಾರ: ಸಿಎಂ ಸಿದ್ದರಾಮಯ್ಯ 2028 ರವರೆಗೆ ಪೂರ್ಣ ಅವಧಿಗೆ ಅಧಿಕಾರದಲ್ಲಿ ಮುಂದುವರಿಯುತ್ತಾರೆ ಎಂದು ವಸತಿ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಪುನರುಚ್ಛರಿಸಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಿದ್ದರಾಮಯ್ಯ ನಂತರವೇ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.

ಕೋಲಾರದ ಶ್ರೀನಿವಾಸಪುರದ ಲಕ್ಷ್ಮಿಪುರದಲ್ಲಿ ನೂರಾನಿ ಮಸೀದಿಯನ್ನು ಉದ್ಘಾಟಿಸಲು ಆಗಮಿಸಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಮೀರ್ ಅಹ್ಮದ್, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕು ಎಂದು ನಾವು ಯಾವಾಗಲೂ ಹೇಳುತ್ತಲೇ ಬಂದಿದ್ದೇವೆ. ಆದರೆ ಸಿದ್ದರಾಮಯ್ಯ ನಂತರವೇ ಅವರು ಆಗಬೇಕು, ಅದು ನಮ್ಮ ಬೇಡಿಕೆ ಎಂದರು.

ಡಿ ಕೆ ಶಿವಕುಮಾರ್ ಅವರ ಕಾಂಗ್ರೆಸ್ ನಿಷ್ಠೆಯ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕಾಂಗ್ರೆಸ್ ಶಿವಕುಮಾರ್ ಅವರ ರಕ್ತದಲ್ಲಿ ಹರಿಯುತ್ತದೆ. ನಮ್ಮಲ್ಲಿ ಹಲವರು ಬೇರೆ ಬೇರೆ ಪಕ್ಷಗಳಿಂದ ಬಂದಿದ್ದೇವೆ, ಆದರೆ ಕಾಂಗ್ರೆಸ್ ಡಿ ಕೆ ಶಿವಕುಮಾರ್ ಅವರ ರಕ್ತದಲ್ಲಿದೆ. ರಕ್ತವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಾಯಕತ್ವ ಬದಲಾವಣೆಯ ಬಗ್ಗೆ ಪದೇ ಪದೇ ವದಂತಿಗಳು ಕೇಳಿಬರುತ್ತಿರುವ ಬಗ್ಗೆ ಕೇಳಿದಾಗ, ನವೆಂಬರ್ ಕ್ರಾಂತಿ, ಡಿಸೆಂಬರ್ ಕ್ರಾಂತಿ ಮತ್ತು ಈಗ ಜನವರಿ ಸಂಕ್ರಾಂತಿ ಬಗ್ಗೆ ಮಾತನಾಡಿದವರು ಏನೂ ಆಗುವುದಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ಹೈಕಮಾಂಡ್ ಸಿದ್ದರಾಮಯ್ಯ ಜೊತೆಗಿದೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago