ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಡೆ ಕಾಂಗ್ರೆಸ್ ನಾಯಕತ್ವವನ್ನು ಕಕ್ಕಾಬಿಕ್ಕಿಗೊಳಿಸಿದೆ. ಸಮ್ಮಿಶ್ರ ಸರ್ಕಾರದ ಸಂಪುಟ ರಚನೆ ಬಳಿಕ ಉಂಟಾದ ಗೊಂದಲ ಪರಿಹಾರಕ್ಕೆ ನಿಯೋಜನೆಗೊಂಡಿದ್ದ ಅವರು, ಪಕ್ಷ ಒಡೆದ ಮನೆಯಂತಾಗಿದ್ದರೂ ಅಸಮಾಧಾನ ಶಮನಗೊಳಿಸುವ ಬದಲು ಚಿಕಿತ್ಸೆ ನೆಪದಲ್ಲಿ ಧರ್ಮಸ್ಥಳ ಕಡೆ ಮುಖಮಾಡಿರುವುದು ಪಕ್ಷದ ನಾಯಕರನ್ನು ಕಂಗಾಲುಗೊಳಿಸಿದೆ.
ಪಕ್ಷದಲ್ಲಿ ಬಂಡಾಯ ಏರುಗತಿಯಲ್ಲಿದ್ದಾಗಲೂ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಯಲ್ಲಿ ಐದು ದಿನ ಪ್ರವಾಸ ನಡೆಸಿದರೇ ಹೊರತು ಬೆಂಗಳೂರಿನ ಕಡೆ ತಲೆ ಹಾಕಲಿಲ್ಲ. ಈ ಬೆಳವಣಿಗೆಯನ್ನು ಗಮನಿಸಿದ ಹೈಕಮಾಂಡ್ ಬಂಡಾಯ ತಣಿಸಲು ಡಿ.ಕೆ.ಶಿವಕುಮಾರ್ ಅವರಿಗೆ ಜವಾಬ್ದಾರಿ ಕಟ್ಟಿತು. ಹಾಗೂ ಹೀಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ಅವರೇ ಪರಿಸ್ಥಿತಿ ನಿಭಾಯಿಸಿದರು. ಇದೀಗ ಎರಡನೇ ಸುತ್ತಿನ ಸಂಪುಟ ವಿಸ್ತರಣೆ, ನಿಗಮ, ಮಂಡಳಿ ನೇಮಕ ಸಂಬಂಧ ಪ್ರಕ್ರಿಯೆ ಚುರುಕಾಗಿ ನಡೆದಿದೆ. ಆಶ್ಚರ್ಯವೆಂದರೆ ಸಿದ್ದರಾಮಯ್ಯ ಜೂನ್ 17ರಂದು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದು 12 ದಿನ ಅಲ್ಲೇ ಇರಲಿದ್ದಾರೆ. ಇದು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಕಾರಣವಾಗಿದೆ. ಉಳಿದ ಐದು ಸಚಿವ ಸ್ಥಾನಕ್ಕೆ 20ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಂಟು ಹಿರಿಯ ನಾಯಕರೇ ಬಂಡೆದ್ದು ಪಕ್ಷಕ್ಕೆ ಮುಜುಗರ ತರುತ್ತಿರುವಾಗ ಸಿದ್ದರಾಮಯ್ಯ ನಡೆ ಸಾಕಷ್ಟು ಕುತೂಹಲವನ್ನೂ ಮೂಡಿಸಿದೆ.
ಸಮ್ಮಿಶ್ರ ಸರ್ಕಾರ ಸಾವಧಾನವಾಗಿ ನಡೆಯಬೇಕೆಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ಇದೀಗ ಅವರು ಧರ್ಮಸ್ಥಳದಿಂದ ವಾಪಸಾಗುವವರೆಗೂ ಸಮನ್ವಯ ಸಮಿತಿ ಸಭೆ ಕೂಡ ನಡೆಯುವಂತಿಲ್ಲ. ಇದು ಜೆಡಿಎಸ್ಗೂ ಇರಿಸುಮುರಿಸು ಉಂಟು ಮಾಡಿದೆ. ಸಿದ್ದರಾಮಯ್ಯ ಆಗಮನದ ಬಳಿಕ ಸಮನ್ವಯ ಸಮಿತಿ ಸಭೆ ನಡೆದು ಬಜೆಟ್ಗೆ ಪೂರಕವಾಗಿ ಚರ್ಚೆ ನಡೆಯಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಜುಲೈ 5ರಂದು ಬಜೆಟ್ ಮಂಡನೆಯಾಗಬೇಕಿದೆ. ಈ ನಡುವೆ 6 ದಿನದಲ್ಲೇ 20 ನಿಗಮ ಮಂಡಳಿಗೆ ನೇಮಕವೂ ಆಗಬೇಕಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…