ರಾಜ್ಯ ನ್ಯೂಸ್

ಸಿದ್ದರಾಮಯ್ಯ ನಡೆಗೆ ಕಾಂಗ್ರೆಸ್ ಕಕ್ಕಾಬಿಕ್ಕಿ !!

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ನಡೆ ಕಾಂಗ್ರೆಸ್ ನಾಯಕತ್ವವನ್ನು ಕಕ್ಕಾಬಿಕ್ಕಿಗೊಳಿಸಿದೆ. ಸಮ್ಮಿಶ್ರ ಸರ್ಕಾರದ ಸಂಪುಟ ರಚನೆ ಬಳಿಕ ಉಂಟಾದ ಗೊಂದಲ ಪರಿಹಾರಕ್ಕೆ ನಿಯೋಜನೆಗೊಂಡಿದ್ದ ಅವರು, ಪಕ್ಷ ಒಡೆದ ಮನೆಯಂತಾಗಿದ್ದರೂ ಅಸಮಾಧಾನ ಶಮನಗೊಳಿಸುವ ಬದಲು ಚಿಕಿತ್ಸೆ ನೆಪದಲ್ಲಿ ಧರ್ಮಸ್ಥಳ ಕಡೆ ಮುಖಮಾಡಿರುವುದು ಪಕ್ಷದ ನಾಯಕರನ್ನು ಕಂಗಾಲುಗೊಳಿಸಿದೆ.

ಪಕ್ಷದಲ್ಲಿ ಬಂಡಾಯ ಏರುಗತಿಯಲ್ಲಿದ್ದಾಗಲೂ ಸಿದ್ದರಾಮಯ್ಯ ತಮ್ಮ ಕ್ಷೇತ್ರ ಬಾದಾಮಿಯಲ್ಲಿ ಐದು ದಿನ ಪ್ರವಾಸ ನಡೆಸಿದರೇ ಹೊರತು ಬೆಂಗಳೂರಿನ ಕಡೆ ತಲೆ ಹಾಕಲಿಲ್ಲ. ಈ ಬೆಳವಣಿಗೆಯನ್ನು ಗಮನಿಸಿದ ಹೈಕಮಾಂಡ್ ಬಂಡಾಯ ತಣಿಸಲು ಡಿ.ಕೆ.ಶಿವಕುಮಾರ್ ಅವರಿಗೆ ಜವಾಬ್ದಾರಿ ಕಟ್ಟಿತು. ಹಾಗೂ ಹೀಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಮತ್ತು ಡಿ.ಕೆ.ಶಿವಕುಮಾರ್ ಅವರೇ ಪರಿಸ್ಥಿತಿ ನಿಭಾಯಿಸಿದರು. ಇದೀಗ ಎರಡನೇ ಸುತ್ತಿನ ಸಂಪುಟ ವಿಸ್ತರಣೆ, ನಿಗಮ, ಮಂಡಳಿ ನೇಮಕ ಸಂಬಂಧ ಪ್ರಕ್ರಿಯೆ ಚುರುಕಾಗಿ ನಡೆದಿದೆ. ಆಶ್ಚರ್ಯವೆಂದರೆ ಸಿದ್ದರಾಮಯ್ಯ ಜೂನ್ 17ರಂದು ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲಿದ್ದು 12 ದಿನ ಅಲ್ಲೇ ಇರಲಿದ್ದಾರೆ. ಇದು ಕಾಂಗ್ರೆಸ್ ನಾಯಕರ ಸಿಟ್ಟಿಗೆ ಕಾರಣವಾಗಿದೆ. ಉಳಿದ ಐದು ಸಚಿವ ಸ್ಥಾನಕ್ಕೆ 20ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಂಟು ಹಿರಿಯ ನಾಯಕರೇ ಬಂಡೆದ್ದು ಪಕ್ಷಕ್ಕೆ ಮುಜುಗರ ತರುತ್ತಿರುವಾಗ ಸಿದ್ದರಾಮಯ್ಯ ನಡೆ ಸಾಕಷ್ಟು ಕುತೂಹಲವನ್ನೂ ಮೂಡಿಸಿದೆ.

ಸಮ್ಮಿಶ್ರ ಸರ್ಕಾರ ಸಾವಧಾನವಾಗಿ ನಡೆಯಬೇಕೆಂಬ ಉದ್ದೇಶದಿಂದ ಸಿದ್ದರಾಮಯ್ಯ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು, ಇದೀಗ ಅವರು ಧರ್ಮಸ್ಥಳದಿಂದ ವಾಪಸಾಗುವವರೆಗೂ ಸಮನ್ವಯ ಸಮಿತಿ ಸಭೆ ಕೂಡ ನಡೆಯುವಂತಿಲ್ಲ. ಇದು ಜೆಡಿಎಸ್​ಗೂ ಇರಿಸುಮುರಿಸು ಉಂಟು ಮಾಡಿದೆ. ಸಿದ್ದರಾಮಯ್ಯ ಆಗಮನದ ಬಳಿಕ ಸಮನ್ವಯ ಸಮಿತಿ ಸಭೆ ನಡೆದು ಬಜೆಟ್​ಗೆ ಪೂರಕವಾಗಿ ಚರ್ಚೆ ನಡೆಯಬೇಕಿದೆ. ಸದ್ಯದ ಮಾಹಿತಿ ಪ್ರಕಾರ ಜುಲೈ 5ರಂದು ಬಜೆಟ್ ಮಂಡನೆಯಾಗಬೇಕಿದೆ. ಈ ನಡುವೆ 6 ದಿನದಲ್ಲೇ 20 ನಿಗಮ ಮಂಡಳಿಗೆ ನೇಮಕವೂ ಆಗಬೇಕಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago