ಬಳ್ಳಾರಿ : ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದರು.
ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಹೇಳಿದರು.
ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…