ಬಳ್ಳಾರಿ : ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಮುಟ್ಟಿದ್ರೆ ಸುಟ್ಟೋಗ್ತಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ. ಸಿಎಂ, ಕೆಪಿಸಿಸಿ ಸ್ಥಾನ ಖಾಲಿ ಇಲ್ಲ. ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಇದ್ದಾರೆ. ಸಿಎಂ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದಾರೆ. ಖಾಲಿ ಇದ್ರೆ ತಾನೇ ಚರ್ಚೆ ಎಂದರು.
ಸಿಎಂ ಸಿದ್ದರಾಮಯ್ಯ ಖುರ್ಚಿ ಮುಟ್ಟೋಕೆ ಸಾಧ್ಯ ಏನ್ರಿ? ಅದೊಂಥರ ಬೆಂಕಿ ಅದು, ಬೆಂಕಿ ಮುಟ್ಟಿದ್ರೆ ಸುಟ್ಟೋಗ್ತಾರೆ. ಸಿದ್ದರಾಮಯ್ಯ ಬೆಂಕಿ ಇದ್ದಂತೆ, ನಾವು ಟಗರು ಅಂತೀವಿ. ಆ ಬೆಂಕಿ ಮುಟ್ಟೋಕೆ ಸಾಧ್ಯವಿಲ್ಲ, ಮುಟ್ಟಿದ್ರೆ ಭಸ್ಮ ಆಗ್ತಾರೆ ಎಂದು ಹೇಳಿದರು.
ನಮ್ಮ ಪಕ್ಷ ಹೈಕಮಾಂಡ್ ಪಕ್ಷ, ಹೈ ಕಮಾಂಡ್ ನಿರ್ಧಾರಕ್ಕೆ ಬದ್ಧ. ಹೈಕಮಾಂಡ್ ಬದಲಾವಣೆ ಮಾಡಬೇಕು ಅಂತ ನಿರ್ಧಾರ ಮಾಡಿದ್ರೆ ನಾವು ಅಭಿಪ್ರಾಯ ತಿಳಿಸಬಹುದು. ಆದರೆ ಹೈಕಮಾಂಡ್ ಯಾವುದೇ ನಿರ್ಧಾರಕ್ಕೆ ಇನ್ನೂ ಬಂದಿಲ್ಲ. ನಮ್ಮ ಪಕ್ಷದವರು ಯಾರೂ ಕೂಡ ಸಿದ್ದರಾಮಯ್ಯ ಬದಲಾವಣೆ ಮಾಡಲಿ ಅಂತಲೂ ಹೇಳಿಲ್ಲಾ. ಎಲ್ಲಾ ಸಮಾಜಕ್ಕೂ ಸಿಎಂ ಆಗಬೇಕು ಅಂತ ಆಸೆ ಇರುತ್ತೆ. ದಲಿತ, ಅಲ್ಪಸಂಖ್ಯಾತ, ಎಸ್ಸಿ, ಎಸ್ಟಿ, ಲಿಂಗಾಯತ ಸಮುದಾಯ ಎಲ್ಲರೂ ಸಿಎಂ ಆಗಬೇಕು ಅಂತಾರೆ. ತೀರ್ಮಾನ ಹೈ ಕಮಾಂಡ್ ಗೆ ಬಿಟ್ಟಿದ್ದು ಎಂದಿದ್ದಾರೆ.
ಬೇಕರಿ ತಿನಿಸು, ಚಿಪ್ಸ್ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…
ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…
ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…