ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರು ಪ್ರವೇಶಿಸದಂತೆ ನಗರದ ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಅವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ನಿಷೇಧ ಡಿ.22 ರ ಮಧ್ಯರಾತ್ರಿ ವರೆಗೆ ಜಾರಿಯಲ್ಲಿರುತ್ತದೆ.
ಬೆಂಗಳೂರು ,ಹುಬ್ಬಳ್ಳಿ, ಮೈಸೂರು, ಗೋವಾ ಏರ್ ಪೋರ್ಟ್ ನಿಂದ ಕರೆತರುವಂತಿಲ್ಲ ಹಾಗೂ ರಸ್ತೆ , ರೈಲು, ವಾಯುಯಾನದ ಮೂಲಕ ಮಂಗಳೂರಿಗೆ ಬರುವಂತಿಲ್ಲ, ಯಾರೂ ಅವರ ಪ್ರಯಾಣಕ್ಕೆ ಸಹಕರಿಸುವಂತಿಲ್ಲ ಎಂದು ನೋಟೀಸ್ ನಲ್ಲಿ ಉಲ್ಲೇಖಿಸಿ ನಿಷೇಧ ಹೇರಲಾಗಿದೆ.
ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆ ಹಿಂಸಾತ್ಮಕ ಘಟನೆಗಳು ನಡೆದುದ್ದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ಫ್ಯೂ ಜಾರಿಗೊಳಿಸಲಾಗಿತ್ತು.
ಪೊಲೀಸ್ ನಿರೀಕ್ಷರು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಇವರ ಆದೇಶದಂತೆ ಈ ನೋಟಿಸ್ ಜಾರಿ ಮಾಡಲಾಗಿದೆ ಎಂದು ಆಯುಕ್ತರು ನೋಟಿಸ್ ನಲ್ಲಿ ತಿಳಿಸಿದ್ದಾರೆ.
ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಮಂಗಳೂರಿಗೆ ತೆರಳಬೇಕಿತ್ತು. ಆದರೆ, ಅವರಿಗೆ ಪತ್ರ ಕಳುಹಿಸಿರುವ ಮಂಗಳೂರು ಪೊಲೀಸ್ ಆಯುಕ್ತರು, ಮಂಗಳೂರಿನಲ್ಲಿ ಡಿ. 22ರವರೆಗೂ ಕರ್ಫ್ಯೂ ಜಾರಿಯಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಕರ್ಫ್ಯೂ ಇದೆ. ಹೀಗಾಗಿ, ಡಿ.22ರ ರಾತ್ರಿ 12ರವರೆಗೂ ತಾವು ಮಂಗಳೂರಿಗೆ ಬರುವಂತಿಲ್ಲ. ತಾವು ಇಲ್ಲಿಗೆ ಆಗಮಿಸುವುದರಿಂದ ಕಾನೂನು ಸುವ್ಯವಸ್ಥೆ, ಶಾಂತಿಗೆ ಭಂಗವಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮಂಗಳೂರು ನಗರಕ್ಕೆ ನಿರ್ಬಂಧ ವಿಧಿಸಲಾಗಿದೆ. ಯಾವುದೇ ರೀತಿಯ ಸಾರಿಗೆ ಸೌಲಭ್ಯ ನಿಷೇಧಗೊಳಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತರು ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…