ಬೆಂಗಳೂರು : “ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ” ಎಂದು ಬಿಜೆಪಿ ಒತ್ತಾಯಿಸಿದೆ.
ರಾಜ್ಯಪಾಲರ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಸಂಬಂಧ ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, “ಸಿದ್ದರಾಮಯ್ಯನವರೇ ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ. ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ” ಎಂದು ಆಗ್ರಹಿಸಿದೆ.
ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ ಸಿದ್ದರಾಮಯ್ಯ ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದು ಸ್ವಾಗತಾರ್ಹ. ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್ ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ ಎಂದು ಬಿಜೆಪಿ ತಿಳಿಸಿದೆ.
ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…