ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಖುರ್ಚಿ ಕಾದಾಟ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ. ಮೂರು ವರ್ಷದ ಸರ್ಕಾರದಲ್ಲಿ 2.5 ವರ್ಷ ಸಿಎಂ ಬದಲಾವಣೆ ಬಗ್ಗೆಯೆ ಚರ್ಚೆಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ. ಒಂದು ಕಡೆ ಬರಗಾಲ ಮತ್ತೊಂದು ಕಡೆ ನೆರೆ ಬರುತ್ತಿದೆ. ಬೆಂಗಳೂರು ಮಳೆಯಿಂದ ಮುಳುಗುತ್ತಿದೆ, ಗಾರ್ಬೆಜ್ನ ಹಗರಣ ನಡೆಯುತ್ತಿದೆ. ಇವೆಲ್ಲವನ್ನೂ ಬಿಟ್ಟು ಖುರ್ಚಿಗಾಗಿ ಹೊಡೆದಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:
ಸಿದ್ದರಾಮಯ್ಯ ಖುರ್ಚಿ ಉಳಿಸುವ ಯತ್ನ ಮಾಡುತ್ತಿದ್ದರೆ, ಡಿಕೆಶಿ ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಜನರು ಬಡವರಾಗಿದ್ದಾರೆ. ಯಾವುದೆ ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಅಭಿವೃದ್ಧಿಗೆ ಹಣವಿಲ್ಲ. ಜನರ ಕೆಲಸ ಮಾಡಲು 135 ಸೀಟ್ ಗೆಲ್ಲಿಸಿದ್ದಾರೆ, ಜನರ ಕೆಲಸ ಮಾಡಿ ಎಂದು ಕಿಡಿಕಾರಿದರು.
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…
ಉಡುಪಿ: ಸ್ಪೀಡ್ ರಾಡಾರ್ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ ಉಡುಪಿ :…