ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಖುರ್ಚಿ ಕಾದಾಟ ವಿಚಾರವಾಗಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ. ಮೂರು ವರ್ಷದ ಸರ್ಕಾರದಲ್ಲಿ 2.5 ವರ್ಷ ಸಿಎಂ ಬದಲಾವಣೆ ಬಗ್ಗೆಯೆ ಚರ್ಚೆಯಾಗಿದೆ. ಕಾಂಗ್ರೆಸ್ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿಯಿಲ್ಲ. ಒಂದು ಕಡೆ ಬರಗಾಲ ಮತ್ತೊಂದು ಕಡೆ ನೆರೆ ಬರುತ್ತಿದೆ. ಬೆಂಗಳೂರು ಮಳೆಯಿಂದ ಮುಳುಗುತ್ತಿದೆ, ಗಾರ್ಬೆಜ್ನ ಹಗರಣ ನಡೆಯುತ್ತಿದೆ. ಇವೆಲ್ಲವನ್ನೂ ಬಿಟ್ಟು ಖುರ್ಚಿಗಾಗಿ ಹೊಡೆದಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:
ಸಿದ್ದರಾಮಯ್ಯ ಖುರ್ಚಿ ಉಳಿಸುವ ಯತ್ನ ಮಾಡುತ್ತಿದ್ದರೆ, ಡಿಕೆಶಿ ಸಿಎಂ ಆಗುವ ಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ರಾಜ್ಯದ ಜನರು ಬಡವರಾಗಿದ್ದಾರೆ. ಯಾವುದೆ ಮಂತ್ರಿಗಳು ಜಿಲ್ಲಾ ಪ್ರವಾಸ ಮಾಡುತ್ತಿಲ್ಲ, ಅಭಿವೃದ್ಧಿಗೆ ಹಣವಿಲ್ಲ. ಜನರ ಕೆಲಸ ಮಾಡಲು 135 ಸೀಟ್ ಗೆಲ್ಲಿಸಿದ್ದಾರೆ, ಜನರ ಕೆಲಸ ಮಾಡಿ ಎಂದು ಕಿಡಿಕಾರಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…