Featured

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” : ವಿ.ಸುನೀಲ್ ಕುಮಾರ್ – vishwanews24

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” : ವಿ.ಸುನೀಲ್ ಕುಮಾರ್

ಬೆಂಗಳೂರು: ರಾಜಕೀಯವಾಗಿ ಸಂಕಷ್ಟ ಬಂದಾಗಲೆಲ್ಲ ಜಾತಿ ಗಣತಿ ವರದಿ ಜಾರಿ ವಿಚಾರ ಪ್ರಸ್ತಾಪಿಸಿ ಹಿಂದುಳಿದ ಹಾಗೂ ಶೋಷಿತ ವರ್ಗದ ದಾರಿ ತಪ್ಪಿಸಿವುದು ಸಿಎಂ ಸಿದ್ದರಾಮಯ್ಯರಿಗೆ ಚಟವಾಗಿ ಬಿಟ್ಟಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್ ಟೀಕಿಸಿದ್ದಾರೆ.

ಸಿದ್ದರಾಮಯ್ಯರಿಗೆ ಜಾತಿ ಗಣತಿ ವರದಿ ಎನ್ನುವುದು ಖುರ್ಚಿ ಭದ್ರಪಡಿಸಿಕೊಳ್ಳುವುದಕ್ಕಾಗಿನ ಮಹಾನ್ ಅಸ್ತ್ರವಾಗಿದೆ. ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷೆ ಜಾರಿ, ಅಹಿಂದ ವರ್ಗಕ್ಕೆ ಅನ್ಯಾಯ ಎಂದು ಭಾಷಣ ಬಿಗಿದು ಬಚಾವ್ ಆಗುವುದು ಚಾಳಿಯಾಗಿ ಬಿಟ್ಟಿದೆ. ಪೊಲೀಸ್ ಭಾಷೆಯಲ್ಲಿ ಹೇಳಬೇಕೆಂದರೆ ಇದು ವೃತ್ತಿಪರ ಆರೋಪಿ ಎಸಗುವ “ಗಮನ ಸೆಳೆಯುವ ತಂತ್ರ” ಎಂದು ವ್ಯಂಗ್ಯವಾಡಿದ್ದಾರೆ.

ಸಿದ್ದರಾಮಯ್ಯ ಹಾದಿ ತಪ್ಪಿಸುವುದರಲ್ಲಿ “ಎಕ್ಸ್ ಪರ್ಟ್” ! ಇಡಿ ಕರ್ನಾಟಕವನ್ನು ನಾಲ್ಕು ದಶಕಗಳಿಂದ ಹಾದಿ ತಪ್ಪಿಸುತ್ತಲೇ ಬಂದಿದ್ದೀರಿ. ರಾಮಕೃಷ್ಣ ಹೆಗಡೆ, ದೇವೇಗೌಡ, ಎಸ್.ಎಂ.ಕೃಷ್ಣರಂಥ ಘಟಾನುಘಟಿಗಳ ಪಥವನ್ನೇ ಬದಲಿಸಿದ ನಿಮಗೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಯಾವುದಾದರೂ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ನೀಡಬೇಕಿದೆ ಎಂದು ಟೀಕಿಸಿದ್ದಾರೆ.

ಮುಡಾ ವಿಚಾರದಲ್ಲಿ ಸಂಕಷ್ಟ ಎದುರಾಗುತ್ತಿದ್ದಂತೆ ನೀವು ಜಾತಿ ಗಣತಿ ವಿಚಾರವನ್ನು ಮುಂದಿಟ್ಟುಕೊಂಡು ಹಿಂದುಳಿದ ಹಾಗೂ ಶೋಷಿತ ವರ್ಗದ ದಿಕ್ಕು ತಪ್ಪಿಸಲು ಹೊರಟಿದ್ದೀರಿ. ಎಷ್ಟು ದಿನ ಈ ನಾಟಕ ? ಅಧಿಕಾರಕ್ಕೆ ಬಂದಾಗಿನಿಂದ ಜಾತಿ ಗಣತಿ ಅನುಷ್ಠಾನ ಮಾಡುತ್ತೇನೆ ಎಂದು ಹೇಳುತ್ತಲೇ ಬಂದಿದ್ದೀರೇ ವಿನಾ ಆ ದಿಶೆಯಲ್ಲಿ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ. ಹಲವು ಕಾರಣದಿಂದ ಜಾರಿಯಾಗಿಲ್ಲ ಎಂದು ಮಗುಮ್ಮಾಗಿ ಹೇಳಿದರೆ ಸಾಕೆ ? ಆ ಕಾರಣವನ್ನು ಬಹಿರಂಗಪಡಿಸಿ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಭಯವೇ ? ಅಥವಾ ವರದಿಯಲ್ಲಿ ಲೋಪಗಳಿವೆಯೇ ? ಯಾವುದನ್ನೂ ಸ್ಪಷ್ಟಪಡಿಸದೇ “ಜಾರಿ ಜಪ” ಎಷ್ಟು ವರ್ಷ ಮುಂದುವರಿಸುತ್ತೀರಿ ? ಎಂದು ಸುನೀಲ್ ಕುಮಾರ್ ಪ್ರಶ್ನಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

10 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

10 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

11 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

11 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

11 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

13 hours ago