Featured

ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆ : ಆ. 3ಕ್ಕೆ ದಾವಣಗೆರೆಯಲ್ಲಿ ಅಮೃತ ಮಹೋತ್ಸವ – Vishwanews24

ಸಿದ್ದರಾಮಯ್ಯ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆ : ಆ. 3ಕ್ಕೆ ದಾವಣಗೆರೆಯಲ್ಲಿ ಅಮೃತ ಮಹೋತ್ಸವ

ಬೆಂಗಳೂರು: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ವರ್ಷದ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯಲ್ಲಿ ಅಮೃತ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಸಮಾವೇಶವನ್ನು ಎಐಸಿಸಿ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ’ ಎಂದು‌ ‘ಸಿದ್ದರಾಮಯ್ಯ–75 ಅಭಿನಂದನಾ ಸಮಿತಿ’ಯ ಗೌರವಾಧ್ಯಕ್ಷರೂ ಆಗಿರುವ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ‘ನಾಲ್ಕು ದಶಕಗಳಿಂದ ಸಿದ್ದರಾಮಯ್ಯ ಅವರು ರಾಜಕೀಯದಲ್ಲಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಹಲವು ಹೋರಾಟಗಳಲ್ಲಿ ಭಾಗಿಯಾಗಿ ಪ್ರೊ. ನಂಜುಂಡಸ್ವಾಮಿ ಜೊತೆ ಗುರುತಿಸಿಕೊಂಡರು. ರಾಜಕೀಯ ಕ್ಷೇತ್ರದಲ್ಲಿ ಏಳುಬೀಳು ಕಂಡಿದ್ದಾರೆ. ಅವರ ಅಭಿಮಾನಿಗಳು, ಹಿತೈಷಿ ಗಳ ಒತ್ತಾಸೆಯಿಂದ ಅಮೃತ ಮಹೋ ತ್ಸವ ಮಾಡಲಾಗುತ್ತಿದೆ’ ಎಂದರು.

‘ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ’ ಎಂದರು.

ಕಾಂಗ್ರೆಸ್‌ ಮುಖಂಡರಾದ ಎಚ್.ಸಿ. ಮಹದೇವಪ್ಪ, ನಜೀರ್ ಅಹಮದ್, ಭೈರತಿ ಸುರೇಶ್, ಜಯಮಾಲಾ, ಎಚ್. ಆಂಜನೇಯ, ಎಚ್. ಹನುಮಂತಯ್ಯ, ಎಸ್.ಎಸ್. ಮಲ್ಲಿಕಾರ್ಜುನ, ಪಿ.ಜಿ.ಆರ್. ಸಿಂಧ್ಯಾ, ಬಿ.ಎಲ್. ಶಂಕರ್ ಇದ್ದರು.‌

Vishwa News 24

Recent Posts

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

6 minutes ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

11 minutes ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 minutes ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

24 minutes ago

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

38 minutes ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

44 minutes ago