ಬೆಂಗಳೂರು : ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕುರಿತಾಗಿ ಸಿದ್ದು ನಿಜ ಕನಸುಗಳು ಪುಸ್ತಕ ವಿವಾದಕ್ಕೆ ಕಾರಣವಾಗಿದ್ದು, ಸದ್ಯ ಈ ವಿವಾದ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿದೆ.
‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಸಲು ಇಂದು ಬಿಜೆಪಿ ನಿರ್ಧರಿಸಿತ್ತು, ಆದರೆ ಬಿಜೆಪಿಯಿಂದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ.ತಡೆ ಕೋರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು, ಇದೀಗ ಪುಸ್ತಕ ಬೆಂಗಳೂರಿನ 60 ನೇ ಸಿಸಿಹೆಚ್ ನ್ಯಾಯಾಲಯ ತಡೆ ನೀಡಿದೆ.
ಈ ಸಂಬಂಧ ಕಾರಣ ಕೇಳಿ ಸಚಿವ ಅಶ್ವಥ್ ನಾರಾಯಣ್ ಸೇರಿ ಹಲವರಿಗೆ ಕೋರ್ಟ್ ನೋಟಿಸ್ ನೀಡಲಾಗಿದೆ. ಸಿದ್ದು ನಿಜ ಕನಸುಗಳು ಪುಸ್ತಕ ಬಿಡುಗಡೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಟೌನ್ ಹಾಲ್ ಮುಂದೆ ಪ್ರತಿಭಟನೆ ನಡೆಸಿದ್ದು, ಕರ ಪತ್ರಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಜ ಕನಸುಗಳು ಪುಸ್ತಕ ಇದೀಗ ವಿವಾದ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿ ನಡೆದಿದೆ. ಗಲಭೆ ನಡೆಸಿದ ಕೆಲವು ಕೈ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…