ಬಳ್ಳಾರಿ: ಬಳ್ಳಾರಿ ಜಿಲ್ಲಾ ಕಾಂಗ್ರೆಸ್ನಲ್ಲಿನ ಕಿತ್ತಾಟ, ಭಿನ್ನಮತಗಳಿಗೆ ಕೊನೆಯೇ ಇಲ್ಲ ಅನ್ನಿಸುತ್ತಿದೆ. ಸಚಿವ ಸ್ಥಾನಕ್ಕಾಗಿ ಕಿತ್ತಾಡಿದ್ದಾಯ್ತು, ಜಿಲ್ಲಾಧಿಕಾರಿ ವಿಚಾರದಲ್ಲಿ ಪತ್ರ ಸಮರ ನಡೆಸಿದ್ದಾಯ್ತು, ಈಗ ಮತ್ತೊಂದು ಕಿತ್ತಾಟ ಶುರುವಾಗಿದೆ. ಅದು ಮಾಜಿ ಸಿಎಂ ಸಿದ್ದರಾಮಯ್ಯರ ಶಿಷ್ಯರಾದ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಹಾಗೂ ಹೊಸಪೇಟೆ ಶಾಸಕ ಆನಂದ್ ಸಿಂಗ್ ನಡುವೆ ಶೀತಲ ಸಮರ ನಡೆದಿದೆ.
ಇತ್ತೀಚೆಗೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಇವರಿಬ್ಬರು ಶಾಸಕರು ಬಹಿರಂಗವಾಗಿ ಆರೋಪ-ಪ್ರತ್ಯಾರೋಪಗಳನ್ನು ಮಾಡಿದ್ದರು. ತಮ್ಮ ಕ್ಷೇತ್ರಗಳಲ್ಲಿ ಪರಸ್ಪರ ಹಸ್ತಕ್ಷೇಪದ ಇವರಿಬ್ಬರು ದೂರು ನೀಡಿದ್ದರು. ಈ ವೇಳೆ ಸ್ವತಃ ಸಿದ್ದರಾಮಯ್ಯ, ಇಬ್ಬರನ್ನು ಸಮಾಧಾನಪಡಿಸಿ ಬುದ್ದಿ ಹೇಳಿದ್ದರು. ಆದರೂ ದೊಡ್ಡವರ ಮಾತು ಕೇಳದ ಶಾಸಕ ಆನಂದಸಿಂಗ್, ಭೀಮಾನಾಯ್ಕ್ ವಿರುದ್ಧ ತೊಡೆತಟ್ಟಿ ನಿಂತಿದ್ದಾರೆ. ಅಳಿಯ ಸಂದೀಪಸಿಂಗ್ ಮೂಲಕ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಘಟನೆಗೆ ಕೈ ಹಾಕಿದ್ದಾರೆ. ಇದಕ್ಕಾಗಿ ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಎರಡು ಮನೆ, ಕಚೇರಿಗಳನ್ನ ಬಾಡಿಗೆ ತಗೆದುಕೊಂಡಿದ್ದಾರಂತೆ. ಇದರಿಂದ ಶಾಸಕರಿಬ್ಬರು ಕಿತ್ತಾಡಿಕೊಂಡಿದ್ದು, ಕಾರ್ಯಕರ್ತರಲ್ಲಿ ಇರಸುಮುರುಸು ಉಂಟು ಮಾಡಿದೆ.
ಕಳೆದೆರಡು ಚುನಾವಣೆಯಲ್ಲಿ ಭೀಮಾನಾಯ್ಕ್ ತಮ್ಮ ಸಹಾಯದಿಂದಲೇ ಗೆದ್ದಿದ್ದು ಅನ್ನೋ ಆನಂದಸಿಂಗ್ ಇದೀಗ ಅವರ ವಿರುದ್ಧವೇ ಕಾಂಗ್ರೆಸ್ ಕಾರ್ಯಕರ್ತರನ್ನ ಎತ್ತಿಗಟ್ಟಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಅಲ್ಲದೇ ಮುಂದಿನ ಚುನಾವಣೆಯಲ್ಲಿ ತಮ್ಮ ಬೆಂಬಲಿಗನ್ನ ಹಗರಿಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿಸಲು ಮುಂದಾಗಿದ್ದಾರೆ. ಒಟ್ಟಿನಲ್ಲಿ ಬಳ್ಳಾರಿ ಕಾಂಗ್ರೆಸ್ ಅಂದ್ರೆ ಕಿತ್ತಾಟ, ಕಾಳಗ ಎನ್ನುವಂತಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…