ರಾಜ್ಯ ನ್ಯೂಸ್

ಸಿದ್ಧರಾಮಯ್ಯನವರ ಮೇಲೆ ಎಫ್.ಐ.ಆರ್..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇತ್ತೀಚೆಗೆ ಎಲ್ಲ ಕಂಟಕಗಳು ಒಂದೇ ಬಾರಿ ಆಗಮಿಸುತ್ತಿದ್ದು ಚಿಂತೆಯನ್ನುಂಟು ಮಾಡಿದೆ. ಸಿದ್ದರಾಮಯ್ಯನವರ ರಾಜಕೀಯ ಬದ್ಧ ವೈರಿಗಳಾದ ದೇವೇಗೌಡರ ಜಾತ್ಯಾತೀತ ಜನತಾ ದಳದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಸೇರಿ ಯಾವಾಗ ಸಮ್ಮಿಶ್ರ ಸರಕಾರ ರಚನೆ ಮಾಡಿತೋ ಅಂದಿನಿಂದ ಸಿದ್ದರಾಮಯ್ಯರವರು ಮೂಲೆಗುಂಪಾದರು, ಅವರ ಆಪ್ತರಿಗೆ ಸಚಿವ ಸ್ಥಾನ ದೊರಕದೇ ಅವರೂ ದೂರವಾದರು. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯರ ಜೊತೆಗಿದ್ದ ಕುರುಬ ಸಮುದಾಯ ಕೂಡ ಇವರೊಂದಿಗೆ ಮುನಿಸಿಕೊಂಡು ಅಲ್ಲಲ್ಲಿ ಪ್ರತಿಭಟನೆ ಸಹ ನಡೆಸಿತ್ತು.

ಈ ಬೆಳವಣಿಗೆಗಳಿಂದ ನೊಂದಿರುವ ಸಿದ್ದರಾಮಯ್ಯ ನವರು ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಿದ್ದರಾಮಯ್ಯ ರಿಗೆ ಮತ್ತೊಂದು ಕಂಟಕ ಎದುರಾಗಿದೆ. 25 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಈ ಮುಖ್ಯಮಂತ್ರಿ ಆಗಿದ್ದಾಗಲೂ ಸೇರಿದಂತೆ 25 ವರ್ಷಗಳಿಂದ ಕಾನೂನು ಹೋರಾಟ ನಡೆಸಿಕೊಂಡು ಬಂದಿದ್ದರು.

ಸಿದ್ದರಾಮಯ್ಯ ಅಂದು ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ವಿಜಯನಗರ ಎಂಬಲ್ಲಿ 2ನೇ ಹಂತದಲ್ಲಿ ಅಕ್ರಮ ನಿವೇಶನ ಪಡೆದಿದ್ದರು ಎನ್ನಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಈ ಕಾನೂನಿನ ಕಂಟಕದಿಂದ ಸಿದ್ದರಾಮಯ್ಯರು ಹೇಗೆ ಪಾರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

21 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

21 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago