ರಾಜ್ಯ ನ್ಯೂಸ್

ಸಿದ್ಧರಾಮಯ್ಯನವರ ಮೇಲೆ ಎಫ್.ಐ.ಆರ್..

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಇತ್ತೀಚೆಗೆ ಎಲ್ಲ ಕಂಟಕಗಳು ಒಂದೇ ಬಾರಿ ಆಗಮಿಸುತ್ತಿದ್ದು ಚಿಂತೆಯನ್ನುಂಟು ಮಾಡಿದೆ. ಸಿದ್ದರಾಮಯ್ಯನವರ ರಾಜಕೀಯ ಬದ್ಧ ವೈರಿಗಳಾದ ದೇವೇಗೌಡರ ಜಾತ್ಯಾತೀತ ಜನತಾ ದಳದೊಂದಿಗೆ ಕಾಂಗ್ರೆಸ್ ಹೈಕಮಾಂಡ್ ಸೇರಿ ಯಾವಾಗ ಸಮ್ಮಿಶ್ರ ಸರಕಾರ ರಚನೆ ಮಾಡಿತೋ ಅಂದಿನಿಂದ ಸಿದ್ದರಾಮಯ್ಯರವರು ಮೂಲೆಗುಂಪಾದರು, ಅವರ ಆಪ್ತರಿಗೆ ಸಚಿವ ಸ್ಥಾನ ದೊರಕದೇ ಅವರೂ ದೂರವಾದರು. ಇಷ್ಟು ವರ್ಷಗಳ ಕಾಲ ಸಿದ್ದರಾಮಯ್ಯರ ಜೊತೆಗಿದ್ದ ಕುರುಬ ಸಮುದಾಯ ಕೂಡ ಇವರೊಂದಿಗೆ ಮುನಿಸಿಕೊಂಡು ಅಲ್ಲಲ್ಲಿ ಪ್ರತಿಭಟನೆ ಸಹ ನಡೆಸಿತ್ತು.

ಈ ಬೆಳವಣಿಗೆಗಳಿಂದ ನೊಂದಿರುವ ಸಿದ್ದರಾಮಯ್ಯ ನವರು ಧರ್ಮಸ್ಥಳದ ಶಾಂತಿವನದಲ್ಲಿರುವ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿಯೇ ಸಿದ್ದರಾಮಯ್ಯ ರಿಗೆ ಮತ್ತೊಂದು ಕಂಟಕ ಎದುರಾಗಿದೆ. 25 ವರ್ಷದ ಹಳೆಯ ಪ್ರಕರಣಕ್ಕೆ ಮರುಜೀವ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯನವರು ಈ ಮುಖ್ಯಮಂತ್ರಿ ಆಗಿದ್ದಾಗಲೂ ಸೇರಿದಂತೆ 25 ವರ್ಷಗಳಿಂದ ಕಾನೂನು ಹೋರಾಟ ನಡೆಸಿಕೊಂಡು ಬಂದಿದ್ದರು.

ಸಿದ್ದರಾಮಯ್ಯ ಅಂದು ಉಪಮುಖ್ಯಮಂತ್ರಿ ಆಗಿದ್ದ ಸಂದರ್ಭ ನಗರಾಭಿವೃದ್ಧಿ ಪ್ರಾಧಿಕಾರದ ಕಾಯಿದೆ ಉಲ್ಲಂಘಿಸಿ ವಿಜಯನಗರ ಎಂಬಲ್ಲಿ 2ನೇ ಹಂತದಲ್ಲಿ ಅಕ್ರಮ ನಿವೇಶನ ಪಡೆದಿದ್ದರು ಎನ್ನಲಾದ ಪ್ರಕರಣದಲ್ಲಿ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್​ ದಾಖಲಿಸಲು ಮೈಸೂರಿನ 2ನೇ ಪ್ರಧಾನ ಸತ್ರ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ. ಈ ಕಾನೂನಿನ ಕಂಟಕದಿಂದ ಸಿದ್ದರಾಮಯ್ಯರು ಹೇಗೆ ಪಾರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago