ಮಂಗಳೂರು: ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷರು ನಾನು ಸತ್ತು ಹೋಗಿದ್ದೇನೆ ಎಂದು ತಿಳಿದು ಕೊಂಡಿದ್ದಾರೆ ಎಂದು ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಂಬಂಧಿಸಿದಂತೆ ಅಭ್ಯರ್ಥಿ ಸ್ಥಾನ ಆಯ್ಕೆ ಸಂಬಂಧ ತನ್ನ ಬಳಿ ಚರ್ಚೆ ನಡೆಸಲಾಗಿದೆ ಎನ್ನುವ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಹರೀಶ್ ಕುಮಾರ್ ಹೇಳಿಕೆಯನ್ನು ಖಂಡಿಸಿದ ಪೂಜಾರಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ತನ್ನ ಬಳಿ ಯಾರೂ ಯಾವ ಚರ್ಚೆಯನ್ನೂ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು. ಜಿಲ್ಲಾಧ್ಯಕ್ಷರು ಕೂಡಲೇ ಈ ಬಗ್ಗೆ ಜನತೆಯಲ್ಲಿ ಕ್ಷಮೆಯಾಚಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಂಗ್ರೇಸ್ ಪಕ್ಷಕ್ಕೆ ಒಂದು ಶನಿ ಇದ್ದಹಾಗೆ, ಸಿದ್ಧರಾಮಯ್ಯ ಕಾಂಗ್ರೇಸ್ ಪಕ್ಷವನ್ನು ಸರ್ವನಾಶ ಮಾಡಿಯೇ ಹೋಗುತ್ತಾರೆ ಎಂದು ಮಾಜಿ ಕೇಂದ್ರ ಸಚಿವ , ಹಿರಿಯ ಕಾಂಗ್ರೇಸ್ ಮುಖಂಡ ಬಿ. ಜನಾರ್ಧನ ಪೂಜಾರಿ ಆರೋಪಿಸಿದ್ದಾರೆ.
ಸಿದ್ಧರಾಮಯ್ಯರಿಂದಲೇ ರಾಜ್ಯದಲ್ಲಿ ಕಾಂಗ್ರೇಸ್ ಈ ಮಟ್ಟಕ್ಕೆ ಬರಲು ಕಾರಣವಾಗಿದೆ ಎಂದರು. ಸಿದ್ಧರಾಮಯ್ಯನವರಿಗೆ ಯಾವುದೇ ಜವಾಬ್ದಾರಿ ನೀಡಬಾರದು ಎಂದು ಹಲವು ಬಾರಿ ಹೈಕಮಾಂಡ್ ಗೆ ತಾನು ಪತ್ರ ಬರೆದಿರುವುದಾಗಿ ಹೇಳಿದ ಪೂಜಾರಿ ಸಿದ್ಧರಾಮಯ್ಯ ಕಾಂಗ್ರೇಸ್ ಪಕ್ಷದಲ್ಲಿ ಇರುವ ತನಕ ಕಾಂಗ್ರೇಸ್ ಗೆ ಶನಿಯೇ ಎಂದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…