Featured

ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಯಶ್ಪಾಲ್ ಸುವರ್ಣ  – vishwanews24

ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಯಶ್ಪಾಲ್ ಸುವರ್ಣ

ಉಡುಪಿ: ಕಾಂಗ್ರೆಸ್ ಪಕ್ಷಕ್ಕೆ ದೇಶದ ಸಂವಿಧಾನ, ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಿಂಚಿತ್ ಗೌರವ, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ನೈತಿಕತೆ ಇದ್ದರೆ ತಕ್ಷಣ ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ರಾಜೀನಾಮೆ ಪಡೆಯಲಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹಿಸಿದ್ದಾರೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡುವ ಮೂಲಕ ಸಿದ್ಧರಾಮಯ್ಯ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಸಿದ್ಧರಾಮಯ್ಯ ಇಂತಹ ಪರಿಸ್ಥಿತಿಯಲ್ಲಿಯೂ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡದೆ ಭಂಡತನ ಪ್ರದರ್ಶನ ಮಾಡಲು ಮುಂದಾದರೆ ರಾಜ್ಯದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.

ಹಿಂದೆ ರಾಜ್ಯಪಾಲರ ನಡೆಯನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ರಾಜ್ಯಾದ್ಯಂತ ದೊಡ್ಡ ಪ್ರತಿಭಟನೆ ಮಾಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರ ನೀಡಿದ್ದ ಪ್ರಾಸಿಕ್ಯೂಷನ್ ನೋಟೀಸ್ ವಜಾ ವಿರುದ್ಧ ಹೈಕೋರ್ಟ್ ತೀರ್ಪಿನಿಂದ ಕಾಂಗ್ರೆಸ್ ಪಕ್ಷಕ್ಕೆ ಮುಖಭಂಗವಾಗಿದೆ.

ಸಿದ್ಧರಾಮಯ್ಯ ತಕ್ಷಣ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿ, ಕಾಂಗ್ರೆಸ್ ಪಕ್ಷ ರಾಜೀನಾಮೆ ಪಡೆಯಲು ಮುಂದಾಗದಿದ್ದಲ್ಲಿ ಸದಾ ಸಂವಿಧಾನ, ನ್ಯಾಯಾಂಗ, ಭ್ರಷ್ಟಾಚಾರ ನಿಯಂತ್ರಣದ ಬಗ್ಗೆ ಭಾಷಣ ಮಾಡುವ ಪಕ್ಷದ ನಕಲಿ ಮುಖವಾಡ ದೇಶದ ಜನತೆಯ ಮುಂದೆ ಕಳಚಿ ಬೀಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

47 minutes ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 hour ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

3 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

4 hours ago