ಸಿದ್ಧಾರ್ಥ್ ಅವರ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು : ಹೆಚ್ ಡಿ ದೇವೇಗೌಡ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು : ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಸಿದ್ಧಾರ್ಥ್ ಅವರ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ.ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು ನೋಡಿದ್ದೇನೆ. ಸಾವಿರಾರು ಜನರ ಸ್ವಾಭಿಮಾನದ ಬದುಕಿಗೆ ದಾರಿಯಾಗಿದ್ದರು. ಅವರ ಈ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

 

ಸಿದ್ದರಾಮಯ್ಯ ಅವರ ಬೆನ್ನಲ್ಲೇ ಇದೀಗ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕೂಡ ಸಿದ್ಧಾರ್ಥ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಅವರ ಸಾವಿನ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಉದ್ಯಮಿ ವಿ.ಜಿ.ಸಿದ್ಧಾರ್ಥ ಅವರ ಸಾವು ಎಷ್ಟು ಎಷ್ಟು ದಾರುಣವೋ, ಅದರ ಹಿನ್ನೆಲೆ ಅಷ್ಟೇ ನಿಗೂಢವಾದುದು. ಅವರನ್ನು ಇಂತಹದ್ದೊಂದು ದುರಂತಕ್ಕೆ‌ ತಳ್ಳಿದ ಕಾರಣಗಳು ಮತ್ತು ಅದರ ಹಿಂದಿನ‌ ಕಾಣದ ಕೈಗಳ ಬಗ್ಗೆ ಸಮಗ್ರ ತನಿಖೆಯಾದರೆ ಮಾತ್ರ ಅವರಿಗೆ ನಾವು ನಿಜವಾದ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿ, ತನಿಖೆಗೆ ಆಗ್ರಹಿಸಿದ್ದರು.