Featured

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕುಟುಂಬದ ನಾಲ್ವರು ಸದಸ್ಯರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು – vishwanews24

ಸಿಬ್ಬಂದಿ ಶೋಷಣೆ ಆರೋಪ: ಹಿಂದೂಜಾ ಕಂಪನಿ ಮಾಲೀಕರಿಗೆ ಜೈಲು ಶಿಕ್ಷೆ ; ಸ್ವಿಡ್ಜರ್ಲೆಂಡ್ ನ್ಯಾಯಾಲಯದಿಂದ ಮಹತ್ವದ ತೀರ್ಪು

ಸ್ವಿಡ್ಜರ್ಲೆಂಡ್: ಬ್ರಿಟನ್ ನಲ್ಲಿರುವ ಭಾರತೀಯ ಸಂಜಾತ ಉದ್ಯಮಿಗಳಲ್ಲೇ ಅತಿ ಶ್ರೀಮಂತ ಉದ್ಯಮಿಗಳೆಂದೆನಿಸಿರುವ ಹಿಂದೂಜ ಕುಟುಂಬದ ನಾಲ್ಕು ದೈತ್ಯ ಉದ್ಯಮಿಗಳಿಗೆ ತಲಾ ನಾಲ್ಕು ವರ್ಷಗಳಿಗೂ ಮೀರಿದ ಜೈಲು ಶಿಕ್ಷೆಯನ್ನು ಸ್ವಿಡ್ಜರ್ಲೆಂಡ್ ನ್ಯಾಯಾಲಯ ವಿಧಿಸಿದೆ. ಪ್ರಕಾಶ್ ಹಿಂದೂಜಾ ಹಾಗೂ ಅವರ ಪತ್ನಿ ಕಮಲ್ ಹಿಂದೂಜಾ ಅವರಿಗೆ ತಲಾ ನಾಲ್ಕು ವರ್ಷ ಆರು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದ್ದರೆ, ಈ ದಂಪತಿಯ ಪುತ್ರರಾದ ಅಜಯ್ ಹಿಂದೂಜಾ ಹಾಗೂ ಅವರ ಪತ್ನಿ ನಮ್ರತಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಸ್ವಿಡ್ಜರ್ಲೆಂಡ್ ನಲ್ಲಿ ಕಾರ್ಮಿಕರ ಕಾನೂನು ಪ್ರಬಲವಾಗಿದ್ದು, ಅಲ್ಲಿ ಯಾವುದೇ ಕೆಲಸಗಾರರಿಗೆ ಅವರ ಕೆಲಸಕ್ಕೆ ತಕ್ಕಂತೆ ಇಂತಿಷ್ಟು ವೇತನವನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂಬು ಕಾನೂನು ಇದೆ. ಅದನ್ನು ಪಾಲಿಸದ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆ ವಿಧಿಸಲಾಗಿದೆ.

ಇದೇ ವೇಳೆ, ಸ್ವಿಡ್ಜರ್ಲೆಂಡ್ ನಲ್ಲಿ ಹಿಂದೂಜಾ ಕಂಪನಿಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಅವರ ಮ್ಯಾನೇಜರ್ ನಜೀಬ್ ಝಿಯಾಝಿ ಅವರನ್ನು 18 ತಿಂಗಳುಗಳ ಕಾಲ ಸೇವೆಯಿಂದ ಅಮಾನತುಗೊಳಿಸುವಂತೆ ಅಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.

ಉದ್ಯೋಗಿಗಳಿಗೆ ನಾನಾ ರೀತಿಯಲ್ಲಿ ಕಿರುಕುಳದ ಆರೋಪ
ತಮ್ಮ ಕಂಪನಿಗಳ ಉದ್ಯೋಗಿಗಳ ಪಾಸ್ ಪೋರ್ಟ್ ಗಳನ್ನು ವಶಪಡಿಸಿಕೊಂಡಿದ್ದ ಹಿಂದೂಜಾ ಕಂಪನಿಯು, ಅವುಗಳನ್ನು ಉದ್ಯೋಗಿಗಳಿಗೆ ವಾಪಸ್ ನೀಡದೇ ಸತಾಯಿಸುತ್ತಿತ್ತು. ಕಡಿಮೆ ವೇತನ ನೀಡಿ ಹೆಚ್ಚು ಗಂಟೆಗಳ ಕಾಲ ದುಡಿಸಿಕೊಳ್ಳುತ್ತಿತ್ತು. ಅಷ್ಟೇ ಅಲ್ಲದೆ, ಉದ್ಯೋಗಿಗಳು ವಾಸಿಸುತ್ತಿದ್ದ ಸ್ಥಳಗಳಿಂದ ಎಲ್ಲೂ ಆಚೆ ಹೋಗದಂತೆ ಅವರಿಗೆ ನಿರ್ಬಂಧಗಳನ್ನು ಹೇರಲಾಗಿತ್ತು.

ಹಿಂದಿ ಮಾತನಾಡುವ ಉದ್ಯೋಗಿಗಳು ಭಾರತದಲ್ಲಿ ಹೊಂದಿರುವ ಖಾತೆಗಳಿಗೆ ರೂಪಾಯಿಗಳ ಲೆಕ್ಕಾಚಾರದಲ್ಲಿ ವೇತನವನ್ನು ಪಾವತಿಸಲಾಗುತ್ತಿತ್ತು. ಆದರೆ, ಅವರು ಸ್ವಿಡ್ಜರ್ಲೆಂಡ್ ನಲ್ಲಿ ವಾಸಿಸುತ್ತಿದ್ದರಿಂದ ಅವರು ದುಡಿದ ಹಣವನ್ನು ಅವರು ಸ್ವಿಡ್ಜರ್ಲೆಂಡ್ ನಿಂದ ಬಳಸಲು ಆಗುತ್ತಿರಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ಹಿಂದೂಜಾ ಕುಟುಂಬದ ವಿರುದ್ಧ ಮಾನವ ಕಳ್ಳಸಾಗಣೆಯ ಆರೋಪವೂ ಇತ್ತು.

ಈ ಮೇಲಿನ ಎಲ್ಲಾ ಆರೋಪಗಳನ್ನು ಸ್ವಿಡ್ಜರ್ಲೆಂಡ್ ನ್ಯಾಯಾಲಯದಲ್ಲಿ ಹಿಂದೂಜಾ ಪರ ವಕೀಲರು ಅಲ್ಲಗಳೆದಿದ್ದರು. ವಾದ ವಿವಾದ ಆಲಿಸಿದ ನ್ಯಾಯಾಲಯ, ಹಿಂದೂಜಾ ಕುಟುಂಬದ ಮೇಲಿದ್ದ ಮಾನವ ಕಳ್ಳಸಾಗಣೆಯ ಆರೋಪವನ್ನು ತಳ್ಳಿಹಾಕಿದೆ. ಆದರೆ, ಅದರ ಜೊತೆಗೆ, ಉದ್ಯೋಗಿಗಳನ್ನು ಶೋಷಣೆಗೆ ಒಳಪಡಿಸಿರುವ ಅಂಶ ಸಾಬೀತಾಗಿರುವುದನ್ನು ಎತ್ತಿ ಹಿಡಿದು ಶಿಕ್ಷೆ ಪ್ರಕಟಿಸಿದೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

12 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

14 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

15 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

15 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

15 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

15 hours ago