Featured

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ – vishwanews24

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಪ್ರಮಾಣದ ಬೆಲೆ ಏರಿಕೆ ಹಿಂದೆ ಎಂದೂ ಕಂಡಿಲ್ಲ. ಕೆಲವು ರಾಜ್ಯಗಳ ಚುನಾವಣೆ ಮುಗಿದ ತಕ್ಷಣ ಇಂತಹ ಜನವಿರೋಧಿ ನಿರ್ಧಾರ ತೆಗೆದುಕೊಂಡಿರುವುದು ಜನರಿಗೆ ನೀಡಿದ ಭರವಸೆಗಳನ್ನೇ ಮರೆತಂತಾಗಿದೆ. ಇದು ನೇರವಾಗಿ ಹೊಟೇಲ್ ಉದ್ಯಮದ ಮೇಲೆ ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಗದಾಪ್ರಹಾರವಾಗಿದೆ ಎಂದಿದ್ದಾರೆ.

ಇದನ್ನೂ ಓದಿ:

ಹೋಟೆಲ್ ಮಾಲೀಕರು ಈಗಾಗಲೇ ಬೆಲೆ ಏರಿಕೆಯ ಒತ್ತಡವನ್ನು ಎದುರಿಸುತ್ತಿದ್ದಾರೆ. ಈ ನಿರ್ಧಾರದಿಂದ ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ. ಅದರ ಪರಿಣಾಮವಾಗಿ ದಿನನಿತ್ಯ ಜೀವನ ನಡೆಸುವ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಜನರ ಜೀವನೋಪಾಯವನ್ನು ಕಷ್ಟಕರಗೊಳಿಸುವ ಬದಲು, ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಆದರೆ, ಚುನಾವಣೆಯ ಬಳಿಕ ಜನರಿಗೆ ಮತ್ತೊಮ್ಮೆ ಮೋಸ ಮಾಡುತ್ತಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ:

ತಕ್ಷಣವೇ ಈ ಅನ್ಯಾಯಕರ ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಜನಪರ ನೀತಿಗಳನ್ನು ಅನುಸರಿಸಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಒತ್ತಾಯಿಸಿದ್ದಾರೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago