ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮತ್ತೊಬ್ಬ ದಕ್ಷ ಪೊಲೀಸ್ ಅಧಿಕಾರಿಯ ಎಂಟ್ರಿಯಾಗಿದೆ. ಕರ್ನಾಟಕ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ಕೆ.ಅಣ್ಣಾಮಲೈ ಬೆಂಗಳೂರು ದಕ್ಷಿಣ ವಿಭಾಗದ ನೂತನ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಣ್ಣಾಮಲೈ ಖಡಕ್ ಅಫೀಸರ್ ಎಂದೇ ಹೆಸರಾಗಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಕಚೇರಿಯಲ್ಲಿ ನಿನ್ನೆ ನಿರ್ಗಮಿತ ಡಿಸಿಪಿ ಶರಣಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಣ್ಣಾಮಲೈ, ಸರ್ಕಾರದ ಆದೇಶದಂತೆ ಡಿಸಿಪಿಯಾಗಿ ವರ್ಗಾವಣೆಯಾಗಿದ್ದು, ತಮ್ಮ ಮೇಲೆ ಹೊಣೆಗಾರಿಕೆ ಹೆಚ್ಚಿದೆ ಎಂದು ತಿಳಿಸಿದರು.
ಅಪರಾಧ ಪ್ರಕರಣಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ , ದಕ್ಷ ಅಧಿಕಾರಿ ಎಂದೇ ರಾಜ್ಯಾದ್ಯಂತ ಹೆಸರಾಗಿರುವ ಚಿಕ್ಕಮಗಳೂರು ಎಸ್ಪಿಯಾಗಿದ್ದ ಕೆ. ಅಣ್ಣಾಮಲೈ ಅವರನ್ನು ಬೆಂಗಳೂರು ದಕ್ಷಿಣ ವಿಭಾಗೀಯ ಡಿಸಿಪಿಯಾಗಿ ವರ್ಗಾವಣೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಪಶ್ಚಿಮ ವಲಯದಲ್ಲಿ ಈಗಾಗಲೇ ರವಿ ಚೆನ್ನಣ್ಣವರ್, ಡಿಸಿಪಿಯಾಗಿದ್ದು, ಮತ್ತೋರ್ವ ದಕ್ಷ ಅಧಿಕಾರ ಅಣ್ಣಾಮಲೈ ಅವರು ದಕ್ಷಿಣ ವಲಯದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿರುವುದರಿಂದ ಇದೀಗ ಸಿಲಿಕಾನ್ ಸಿಟಿ ರೌಡಿಗಳಲ್ಲಿ ನಡುಕು ಉಂಟಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…