ಬೆಂಗಳೂರು: ಎಂಟೂವರೆ ತಿಂಗಳ ಗರ್ಭಿಣಿ ವಕೀಲೆ ಒಬ್ಬರಿಗೆ ಸಿವಿಲ್ ನ್ಯಾಯಾಧೀಶರ ನೇರ ನೇಮಕಾತಿ ಮುಖ್ಯ ಪರೀಕ್ಷೆ ಬರೆಯಲು ವಿಶೇಷ ವ್ಯವಸ್ಥೆ ಮಾಡುವ ಮೂಲಕ ಹೈಕೋರ್ಟ್ ಪ್ರಶಂಸನೀಯವಾದ ನಿರ್ಧಾರ ಕೈಗೊಂಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ನ.18 ಮತ್ತು 19ರಂದು ನಡೆಯಲಿರುವ ಮುಖ್ಯ ಪರೀಕ್ಷೆ ಬರೆಯಲು ವಕೀಲೆ ನೇತ್ರಾವರಿಗೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರು ಅನುಮತಿಸಿದ್ದಾರೆ.
ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ನೇತ್ರಾವತಿ ಅವರು ಎಂಟೂವರೆ ತಿಂಗಳು ಗರ್ಭಿಣಿಯಾಗಿರುವುದರಿಂದ ಅವರ ಆರೋಗ್ಯ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪ್ರವಾಸ ಮಾಡಲಾಗದು. ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದಲ್ಲಿ ಪರೀಕ್ಷೆ ಬರೆಯಲು ಅನುಮತಿಸುವಂತೆ ಕರ್ನಾಟಕ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿಗಳಾದ ಪಿ.ಎಸ್.ದಿನೇಶ್ ಕುಮಾರ್, ಕೆ.ಸೋಮಶೇಖರ್, ಎಸ್. ಸುನಿಲ್ ದತ್ ಯಾದವ್, ಅಶೋಕ್ ಎಸ್. ಕಿಣಗಿ ಮತ್ತು ಎಂ.ನಾಗಪ್ರಸನ್ನ ಅವರನ್ನು ಒಳಗೊಂಡ ಸಿವಿಲ್ ನ್ಯಾಯಾಧೀಶರ ನೇಮಕಾತಿ ಸಮಿತಿಯು ನೇತ್ರಾವತಿ ಅವರ ಕೋರಿಕೆಗೆ ಒಪ್ಪಿಗೆ ಸೂಚಿಸಿದ್ದು, ಮುಖ್ಯ ನ್ಯಾಯಮೂರ್ತಿಗಳೂ ಮುದ್ರೆ ಹಾಕಿದ್ದಾರೆ.
ನೇತ್ರಾವತಿ ಅವರು ಪರೀಕ್ಷೆ ಬರೆಯಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನ್ಯಾಯಾಲಯದ ಪರೀಕ್ಷಾ ಕೇಂದ್ರಕ್ಕೆ ನ್ಯಾಯಾಂಗ ಅಧಿಕಾರಿಯನ್ನು ವೀಕ್ಷಕರನ್ನಾಗಿ ವಿಶೇಷವಾಗಿ ನಿಯೋಜಿಸಲಾಗಿದೆ. ದಕ್ಷಿಣ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮೇಲ್ವಿಚಾರಣೆ ನಡೆಸಲಿದ್ದು, ತುರ್ತು ಸಂದರ್ಭ ಉದ್ಭವಿಸಿದರೆ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ಅವರಿಗೆ ನಿರ್ದೇಶಿಸಲಾಗಿದೆ.
ಉಡುಪಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ : ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ಮಂಜುನಾಥ್ ಭಂಡಾರಿ ಉಡುಪಿ: ಪ್ರಶ್ನೆಪತ್ರಿಕೆ…
ಉಡುಪಿ: ರಿಕ್ಷಾ ಚಾಲಕ ನೇಣು ಬಿಗಿದು ಆತ್ಮಹತ್ಯೆ ಉಡುಪಿ: ಆದಿಉಡುಪಿಯ ಮಧ್ವನಗರದ ರಿಕ್ಷಾ ಚಾಲಕ ತನ್ನ ಮನೆಯಲ್ಲಿ ನೇಣು ಬಿಗಿದು…
ಕೊಂಕಣ ರೈಲ್ವೆಯಲ್ಲಿ ಕಳ್ಳರ ಜಾಲ : ಮತ್ಸ್ಯಗಂಧ, ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಸರಣಿ ಕಳ್ಳತನ ಹಾಗೂ ದರೋಡೆ ಪ್ರಕರಣ ಉಡುಪಿ: ಮಂಗಳೂರಿನಿಂದ…
ಆಳ್ವಾಸ್ ಪ್ರಗತಿ - 2026 : ಆ.7 ಮತ್ತು 8ರಂದು ಬೃಹತ್ ಉದ್ಯೋಗ ಮೇಳ ಉಡುಪಿ: ದೇಶದ ಯುವಜನರ ಉದ್ಯೋಗ…
ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್ ಗಾಂಧಿ ಆರೋಪ ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ…
ಪಡುಬಿದ್ರಿ: ಪಾನ್ ಸ್ಟಾಲ್ನಲ್ಲಿ ಗಾಂಜಾ ಮಾರಾಟ : ಆರೋಪಿ ಅರೆಸ್ಟ್ ಪಡುಬಿದ್ರಿ: ಪಾನ್ ಸ್ಟಾಲ್ ಅಂಗಡಿಯಲ್ಲೇ ಅಕ್ರಮವಾಗಿ ಗಾಂಜಾ ಮಾರಾಟ…