ತಿರುವನಂತಪುರಂ,: ಕೇರಳದ 21 ವರ್ಷದ ಸಿಸ್ಟರ್ ಅಭಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪಾದ್ರಿ ಥಾಮಸ್ ಕೊಟ್ಟೂರ್ ಹಾಗೂ ಸಿಸ್ಟರ್ ಸೆಫಿಗೆ ಸಿಬಿಐ ವಿಶೇಷ ನ್ಯಾಯಾಲಯ ಡಿ.23ರ ಬುಧವಾರದಂದು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ.22ರ ಮಂಗಳವಾರದಂದು ಇಬ್ಬರನ್ನೂ ಕೂಡಾ ಸಿಬಿಐ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿತ್ತು. ಶಿಕ್ಷೆಯ ಪ್ರಮಾಣವನ್ನು ಡಿ.23ರ ಬುಧವಾರದಂದು ಪ್ರಕಟಿಸುವುದಾಗಿ ಕೋರ್ಟ್ ತಿಳಿಸಿತ್ತು.
ಸಿಸ್ಟರ್ ಅಭಯಾ ಅವರು, ಕೊಟ್ಟಾಯಂನ ಚರ್ಚ್ವೊಂದರಲ್ಲಿ ನಡೆಯುತ್ತಿದ್ದ ಕೆಲ ಅನೈತಿಕ ಚಟುವಟಿಕೆಗಳನ್ನು ಕಣ್ಣಾರೆ ಕಂಡಿದ್ದು, ಈ ಹಿನ್ನೆಲೆ ಆ ವಿಚಾರ ಬಹಿರಂಗವಾಗಬಾರದು ಎನ್ನುವ ನಿಟ್ಟಿನಲ್ಲಿ ಸಿಸ್ಟರ್ ಅಭಯಾ ಅವರನ್ನು ಕೊಡಲಿಯ ಹಿಡಿಕೆಯಿಂದ ಹೊಡೆದ ಹತ್ಯೆಗೈದಿದ್ದರು.
1992ರ ಮಾರ್ಚ್ 27ರಂದು ಕೊಟ್ಟಾಯಂ ಪಯಸ್ ಟೆನ್ತ್ ಕಾನ್ವೆಂಟ್ನ ಬಾವಿಯಲ್ಲಿ ಸಿಸ್ಟರ್ ಅಭಯಾ ಶವ ಪತ್ತೆಯಾಗಿತ್ತು. ಇದು ಆತ್ಮಹತ್ಯೆ ಪ್ರಕರಣ ಎಂದು ಸ್ಥಳೀಯ ಪೊಲೀಸರು ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದರು.
ಅಂದಿನ ಕೊಟ್ಟಾಯಂ ನಗರಸಭೆ ಚೇರ್ಮನ್ ಪಿಸಿ ಚೆರಿಯನ್ ಮಡುಕ್ಕನಿ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಜೋಮೋನ್ ಪುತ್ತನ್ ಪುರಕಲ್ ಅವರು ಈ ಪ್ರಕರಣವನ್ನು ಕೋರ್ಟಿಗೆ ಮನವಿ ಮಾಡಿ ಬಳಿಕ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್ಗೆ ವರ್ಗಾಯಿಸಲಾಗಿತ್ತು. ಆದರೆ ಕ್ರೈಂ ಬ್ರಾಂಚ್ ಪೊಲೀಸರು ಕೂಡಾ ಅಭಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಿದ್ದರು.
ಇದಾದ ಬಳಿ ಪೋಷಕರ ವಿರೋಧದ ಪರಿಣಾಮವಾಗಿ 2008ರಲ್ಲಿ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಇದೀಗ 28 ವರ್ಷಗಳ ನಂತರ ಸಿಸ್ಟರ್ ಅಭಯಾ ಹತ್ಯೆ ಪ್ರಕರಣಕ್ಕೆ ನ್ಯಾಯ ಸಿಕ್ಕಂತಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…