Featured

ಸಿ.ಜೆ ರಾಯ್ ಸ್ವತಃ ತಾವೇ ಶೂಟ್ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ – vishwanews24

ಸಿ.ಜೆ ರಾಯ್ ಸ್ವತಃ ತಾವೇ ಶೂಟ್ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್‌ನ ಸಿಇಓ ಡಾ. ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಗುಂಡು ಹಾರಿಸಿಕೊಂಡಿರುವುದು ಘಟನಾ ಸ್ಥಳವನ್ನು ಕೂಲಂಕುಷ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಸಿ.ಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.

ಪಾಕೆಟ್ ಗನ್‌ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್‌ನ್ನು ಹೊರತೆಗೆದು, ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ. ಬುಲೆಟ್‌ಗೆ ಯಾವುದೇ ಸ್ಕ್ರ‍್ಯಾಚ್ ಆಗದಂತೆ ಕಾರ್ಬನ್‌ನಲ್ಲಿ ಸುತ್ತಿ ರವಾನಿಸಲಾಗಿದೆ.

ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ಸಿಜೆ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ದೃಢಪಟ್ಟಿದೆ. ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago