ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ನ ಸಿಇಓ ಡಾ. ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಗುಂಡು ಹಾರಿಸಿಕೊಂಡಿರುವುದು ಘಟನಾ ಸ್ಥಳವನ್ನು ಕೂಲಂಕುಷ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಸಿ.ಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.
ಪಾಕೆಟ್ ಗನ್ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್ನ್ನು ಹೊರತೆಗೆದು, ಎಫ್ಎಸ್ಎಲ್ಗೆ ಕಳುಹಿಸಲಾಗಿದೆ. ಬುಲೆಟ್ಗೆ ಯಾವುದೇ ಸ್ಕ್ರ್ಯಾಚ್ ಆಗದಂತೆ ಕಾರ್ಬನ್ನಲ್ಲಿ ಸುತ್ತಿ ರವಾನಿಸಲಾಗಿದೆ.
ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ಸಿಜೆ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ದೃಢಪಟ್ಟಿದೆ. ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…