ಬೆಂಗಳೂರು : ಕಾನ್ಫಿಡೆಂಟ್ ಗ್ರೂಪ್ನ ಸಿಇಓ ಡಾ. ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ಅವರೇ ಗುಂಡು ಹಾರಿಸಿಕೊಂಡಿರುವುದು ಘಟನಾ ಸ್ಥಳವನ್ನು ಕೂಲಂಕುಷ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ.
ಸಿ.ಜೆ ರಾಯ್ ಅವರು ತಮ್ಮ ಬಲಗೈಯಿಂದ ಎದೆಗೆ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡು ಎದೆಯ ಎಡಭಾಗದ ಮೂಲಕ ದೇಹವನ್ನು ಪ್ರವೇಶಿಸಿ, ಬೆನ್ನಿನ ಭಾಗದಲ್ಲಿ ಸಿಲುಕಿಕೊಂಡಿದೆ. ಒಂದು ಸುತ್ತು ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗನ್ ಅನ್ನು ಎದೆಯ ಮೇಲಿಟ್ಟು ಅತ್ಯಂತ ಸಮೀಪದಿಂದ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ. ಈ ಕಾರಣದಿಂದ ಎದೆಯ ಮೇಲ್ಭಾಗದ ಮಾಂಸಖಂಡಗಳು ಚದುರಿಲ್ಲ, ಬದಲಾಗಿ ಗುಂಡು ನೇರವಾಗಿ ದೇಹದೊಳಗೆ ಆಳವಾಗಿ ಇಳಿದಿದೆ. ಈ ವೇಳೆ ಎದೆ ಛಿದ್ರವಾಗಿ ಗುಂಡು ಬೆನ್ನಿನಲ್ಲಿ ಸಿಲುಕಿಕೊಂಡಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ.
ಪಾಕೆಟ್ ಗನ್ನಿಂದ ಶೂಟ್ ಮಾಡಿಕೊಂಡಿದ್ದು, ಬುಲೆಟ್ ದೇಹದ ಒಳನುಗ್ಗಿದೆ. ಹೃದಯ ಹೊಕ್ಕು, ಶ್ವಾಸಕೋಶ, ರಕ್ತನಾಳಕ್ಕೆ ಹೋಗಿ ಕೊನೆಗೆ 11ನೇ ಪಕ್ಕೆಲುಬಿಗೆ ತಲುಪಿದೆ. ಕೊನೆಗೆ ಅಲ್ಲಿಯೇ ಟರ್ನ್ ಆಗಿ ಎದೆಯಲ್ಲಿ ಸಿಲುಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಬುಲೆಟ್ನ್ನು ಹೊರತೆಗೆದು, ಎಫ್ಎಸ್ಎಲ್ಗೆ ಕಳುಹಿಸಲಾಗಿದೆ. ಬುಲೆಟ್ಗೆ ಯಾವುದೇ ಸ್ಕ್ರ್ಯಾಚ್ ಆಗದಂತೆ ಕಾರ್ಬನ್ನಲ್ಲಿ ಸುತ್ತಿ ರವಾನಿಸಲಾಗಿದೆ.
ಆತ್ಮಹತ್ಯೆಗೆ ಬಳಸಿದ NP bore 0.25 ಪಿಸ್ತೂಲ್ ಸಿಜೆ ರಾಯ್ ಹೆಸರಿನಲ್ಲಿ ಪರವಾನಗಿ ಪಡೆಯಲಾಗಿತ್ತು ಎಂಬುದು ದೃಢಪಟ್ಟಿದೆ. ಸದ್ಯ ಪಿಸ್ತೂಲ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ವಿಧಿವಿಜ್ಞಾನ ಪರೀಕ್ಷೆ ನಡೆಸಲಾಗುತ್ತಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…