Featured

ಸಿ.ಟಿ ರವಿ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರ ಆದ್ರು : ಲಕ್ಷ್ಮಿ ಹೆಬ್ಬಾಳ್ಕರ್‌ ಕಣ್ಣೀರು – vishwanews24

ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಬೆಳಗಾವಿ/ಬೆಂಗಳೂರು: ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌  ಕಣ್ಣೀರಿಟ್ಟಿದ್ದಾರೆ.

ಸುವರ್ಣಸೌಧದ ಪರಿಷತ್‌ ಕಲಾಪದಲ್ಲಿ ಸಿ.ಟಿ ರವಿ  ನಿಂದನೆ ಆರೋಪ ಪ್ರಕರಣದ ಕುರಿತು ಬೆಳಗಾವಿಯಲ್ಲಿಂದು ಸಚಿವೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ನಿನ್ನೆ ಸದನದಲ್ಲಿ ಅಂಬೇಡ್ಕರ್ ಅವರ ಬಗ್ಗೆ ಅವಹೇಳನ ಖಂಡಿಸಿ ಧರಣಿ ಮಾಡುತ್ತಿದ್ದೆವು. ಧರಣಿ ಮಾಡಿ ನಾವೆಲ್ಲ ಕೂತಿದ್ದೆವು ಸಭಾಪತಿಗಳು ಅಡ್ಜರ್ನ್ ಮಾಡಿದ್ದರು. ನಾನು ನನ್ನ ಸೀಟಲ್ಲಿ ಕೂತಿದ್ದೆ ನಮ್ಮ ನಾಯಕ ರಾಹುಲ್ ಗಾಂಧಿಗ ಡ್ರಗ್ ಅಡಿಕ್ಟ್ ಅಂತ 3-4 ಬಾರಿ ಹೇಳಿದರು, ನಾನು ಸುಮ್ಮನೆ ಕುಳಿತಾಗ ಮತ್ತೆ ಹೇಳಿದರು. ಇದರಿಂದ ಸಿಟ್ಟಾಗಿ ನಾವು ಅವರ ಅಪಘಾತ ಪ್ರಕರಣ ಪ್ರಸ್ತಾಪಿಸಿದೆ. ಅದಕ್ಕೆ ಆ ಪದ ಉಪಯೋಗಿಸಿದ್ದಾರೆ. ಒಮ್ಮೆ ಅಲ್ಲ ಹತ್ತು ಬಾರಿ ಹೇಳಿದ್ದಾರೆ ಎಂದು ಕಣ್ಣೀರಿಟ್ಟಿದ್ದಾರೆ.

ನಾನು ಒಬ್ಬ ತಾಯಿ ಇದ್ದೀನಿ, ಅಕ್ಕ ಇದ್ದೀನಿ. ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ನಾನು ಯಾರಿಗೂ ಕಾಟ ಕೊಟ್ಟಿಲ್ಲ. ಆದ್ರೆ ಸಿ.ಟಿ ರವಿ ಅವರು ಹೇಳಿದ ಪದ ಹೇಳೋದಕ್ಕೂ ಅಸಹ್ಯ ಆಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರ ಆದ್ರು. ಡ್ರಗ್ ಅಡಿಕ್ಟ್ ಅಂದಿದ್ದಕ್ಕೆ ನೀವು ಆಕ್ಸಿಡೆಂಟ್ ಮಾಡಿ ಮೂವರ ಕೊಲೆಗಾರ ಎಂದಿದ್ದೆ. ಅದಕ್ಕೆ ಆ ರೀತಿ ಮಾತನಾಡಿದ್ದಾರೆ. ಸದನದಲ್ಲಿ ನ್ಯಾಯ ಸಿಗದ ಬಗ್ಗೆ ನಾನು ಏನೂ ಹೇಳಲ್ಲ. ನನ್ನ ಸೊಸೆ ನನ್ನ ಮಗ ನನಗೆ ಧೈರ್ಯ ತುಂಬಿದ್ದರೆಂದು ತಿಳಿಸಿದ್ದಾರೆ.

Vishwa News 24

Recent Posts

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

5 minutes ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

11 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

2 hours ago

ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  – vishwanews24

ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್ ಆಗಿಲ್ಲ:  ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ ಸ್ಪಷ್ಟನೆ  ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಾಲೋಪವಾಗಿದೆ ಅಂತ ಸಿಎಜಿ…

2 hours ago

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ – vishwanews24

ನನ್ನ , ಡಿ.ಕೆ.ಶಿವಕುಮಾರ್ ಮಧ್ಯೆ ಯಾವುದೇ ವ್ಯವಹಾರಿಕ ಸಂಬಂಧ ಇಲ್ಲ , ಆತ್ಮೀಯತೆಯೂ ಇಲ್ಲ : ವಿಜಯೇಂದ್ರ ಮಂಗಳೂರು :…

3 hours ago