ಸೀಟು ಹಂಚಿಕೆ : ‘ನಾವೇನು ಭಿಕ್ಷುಕರಲ್ಲ’ ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ..Vishwanews24
ಮೈಸೂರು : ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ನಡುವೆ ಆಂತರಿಕ ಕಿತ್ತಾಟಗಳು ನಡೆಯುತ್ತಲೇ ಇವೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಎರಡು ಪಕ್ಷಗಳ ನಡುವೆ ಸೀಟು ಹಂಚಿಕೆ ಬಗ್ಗೆ ಭಿನ್ನಾಭಿಪ್ರಾಯಗಳು ಹುಟ್ಟಿಕೊಂಡಿವೆ.
ಸೀಟು ಹಂಚಿಕೆ ವಿಚಾರವಾಗಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ. ನಾವು ಭಿಕ್ಷುಕರಲ್ಲ, ಕಾಂಗ್ರೆಸ್ನವರು ನಮಗೆ ಏಳೋ, ಐದೋ, ಮೂರೋ ಸೀಟು ಬಿಟ್ಟುಕೊಡುತ್ತಾರೋ ಗೊತ್ತಿಲ್ಲ. ಆದರೆ ನಾವು ಭಿಕ್ಷುಕರಲ್ಲ ಎಂದು ಗರಂ ಆಗಿದ್ದಾರೆ.
ಮೈಸೂರಿನ ಪಾರಂಪರಿಕ ದೇವರಾಜ ಮಾರುಕಟ್ಟೆ ವೀಕ್ಷಣೆ ಬಳಿಕ ಮಾತನಾಡಿದ ಅವರು, ರಾಷ್ಟ್ರಕ್ಕೆ ಒಂದು ಸಂದೇಶ ರವಾನೆಯಾಗಬೇಕಾದರೆ, ಎಲ್ಲರೂ ಕೂತು ಸೀಟು ಹಂಚಿಕೆ ಬಗ್ಗೆ ಚರ್ಚೆ ಮಾಡಬೇಕು. ನಾನು ಆಡಳಿತದ ಕಡೆಗೆ ಗಮನ ಹರಿಸಿದ್ದೇನೆ. ನಮ್ಮ ರಾಷ್ಟ್ರಾಧ್ಯಕ್ಷರು ಕಾಂಗ್ರೆಸ್ ನಾಯಕರ ಜೊತೆ ಕೂತು ಮಾತನಾಡಿ ಸೀಟು ಹಂಚಿಕೆ ಮಾಡಿಕೊಳ್ಳುತ್ತಾರೆ. ನಾನು ಈ ಸೀಟು ಹಂಚಿಕೆ ಬಗ್ಗೆ ಯೋಚನೆ ಮಾಡಿಲ್ಲ ಎಂದರು.
