(ನ್ಯೂಸ್ ಕಡಬ) newskadaba.com ಹಾಸನ, ಮಾ.18. ಸೀಮೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ರಸ್ತೆಯಲ್ಲಿ ಚೆಲ್ಲುತ್ತಿದ್ಧ ಸೀಮೆಎಣ್ಣೆಯನ್ನು ತುಂಬಿಸಿಕೊಳ್ಳಲು ಸಾರ್ವಜನಿಕರು ಹರಸಾಹಸಪಟ್ಟ ಘಟನೆ ಶನಿವಾರದಂದು ಹಾಸನದ ಅರಕಲಗೂಡು ಎಂಬಲ್ಲಿ ನಡೆದಿದೆ.
ಪಡಿತರ ಅಂಗಡಿಗಳಿಗೆ ಸೀಮೆಎಣ್ಣೆ ಪೂರೈಸಲು ತೆರಳುತ್ತಿದ್ದ ಟ್ಯಾಂಕರ್ ಅರಕಲಗೂಡಿನ ಯಗಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಹೊರ ಬರುತ್ತಿದ್ದ ಸೀಮೆಎಣ್ಣೆಯನ್ನು ಪಡೆಯಲು ಜನರು ಪಾತ್ರೆ, ಜಗ್ಗು, ಕ್ಯಾನ್, ಚೊಬ್ಬುಗಳಲ್ಲಿ ತುಂಬಿಕೊಂಡು ಬರುತ್ತಿದ್ದ ದೃಶ್ಯ ಕಂಡುಬಂದಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅರಕಲಗೂಡು ಠಾಣಾ ಪೋಲಿಸರು ಭೇಟಿ ನೀಡಿ ಸ್ಥಳದಲ್ಲಿದ್ದ ಜನರನ್ನು ಚದುರಿಸಲು ಹರಸಾಹಸಪಟ್ಟರು ಎನ್ನಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…