(ನ್ಯೂಸ್ ಕಡಬ) newskadaba.com ಹಾಸನ, ಮಾ.18. ಸೀಮೆ ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ರಸ್ತೆಯಲ್ಲಿ ಚೆಲ್ಲುತ್ತಿದ್ಧ ಸೀಮೆಎಣ್ಣೆಯನ್ನು ತುಂಬಿಸಿಕೊಳ್ಳಲು ಸಾರ್ವಜನಿಕರು ಹರಸಾಹಸಪಟ್ಟ ಘಟನೆ ಶನಿವಾರದಂದು ಹಾಸನದ ಅರಕಲಗೂಡು ಎಂಬಲ್ಲಿ ನಡೆದಿದೆ.
ಪಡಿತರ ಅಂಗಡಿಗಳಿಗೆ ಸೀಮೆಎಣ್ಣೆ ಪೂರೈಸಲು ತೆರಳುತ್ತಿದ್ದ ಟ್ಯಾಂಕರ್ ಅರಕಲಗೂಡಿನ ಯಗಟಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭದಲ್ಲಿ ಟ್ಯಾಂಕರ್ ನಿಂದ ಹೊರ ಬರುತ್ತಿದ್ದ ಸೀಮೆಎಣ್ಣೆಯನ್ನು ಪಡೆಯಲು ಜನರು ಪಾತ್ರೆ, ಜಗ್ಗು, ಕ್ಯಾನ್, ಚೊಬ್ಬುಗಳಲ್ಲಿ ತುಂಬಿಕೊಂಡು ಬರುತ್ತಿದ್ದ ದೃಶ್ಯ ಕಂಡುಬಂದಿದೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅರಕಲಗೂಡು ಠಾಣಾ ಪೋಲಿಸರು ಭೇಟಿ ನೀಡಿ ಸ್ಥಳದಲ್ಲಿದ್ದ ಜನರನ್ನು ಚದುರಿಸಲು ಹರಸಾಹಸಪಟ್ಟರು ಎನ್ನಲಾಗಿದೆ.
ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ ರಾಷ್ಟ್ರೀಯ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ದರ್ಶನ್ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…
ದ. ಕ, ಉಡುಪಿ ಸೇರಿದಂತೆ 5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…