ದಕ್ಷಿಣ ಕನ್ನಡ

ಸುಚಿತ್ರ ಥಿಯೇಟರ್‌; ಇಂದು 3ಡಿ ಪ್ರದರ್ಶನಕ್ಕೆ ಚಾಲನೆ

ಮಹಾನಗರ: ಅತ್ಯಾಧುನಿಕ ಸೌಕರ್ಯಗಳೊಂದಿಗೆ ಈಗಾಗಲೇ ಚಿತ್ರಪ್ರೇಮಿಗಳ ಮನಸ್ಸು ಗೆದ್ದ ನಗರದ ಕೆ.ಎಸ್‌. ರಾವ್‌ ರಸ್ತೆಯ ‘ಸುಚಿತ್ರ’ ಥಿಯೇಟರ್‌ ಇದೀಗ 3ಡಿ ಸೌಕರ್ಯದೊಂದಿಗೆ ಮತ್ತೂಂದು ಬದಲಾವಣೆಗೆ ತೆರೆದುಕೊಂಡಿದೆ. ಮಂಗಳೂರಿನ ಸಿಂಗಲ್‌ ಥಿಯೇಟರ್‌ ಗಳ ಪೈಕಿ ಪ್ರಥಮ ಬಾರಿಗೆ 3ಡಿ ಸೌಕರ್ಯವನ್ನು ಸುಚಿತ್ರ ಅಳವಡಿಸಿದ್ದು, ಇವತ್ತಿನಿಂದ ಪ್ರದರ್ಶನ ಆರಂಭಿಸಲಿದೆ.

ಅತ್ಯಾಧುನಿಕ ಸೌಕರ್ಯಗಳಿರುವ ಸುಚಿತ್ರ ಥಿಯೇಟರ್‌ನಲ್ಲಿ ‘ತ್ರಿಬಲ್‌ ಬಿಮ್‌ 3ಡಿ’ ಸೌಲಭ್ಯವನ್ನು ನೀಡಲಾಗಿದೆ. ಇದಕ್ಕೆ ಹೈಜೆನ್‌ ಸಿಲ್ವರ್‌ ಸ್ಕೀನ್‌ ಕೂಡ ಅಳವ ಡಿಸಲಾಗಿದೆ. ಈ ಮೂಲಕ 3ಡಿ ಸಿನೆಮಾವನ್ನು ಇನ್ನು ಮುಂದೆ ಸುಚಿತ್ರದಂತಹ ಸಿಂಗಲ್‌ ಥಿಯೇಟರ್‌ನಲ್ಲೂ ವೀಕ್ಷಿಸಬಹುದಾಗಿದೆ. ಜಿಲ್ಲೆಯ ಯಾವುದೇ ಸಿಂಗಲ್‌ ಥಿಯೇಟರ್‌ನಲ್ಲಿ ಇಲ್ಲದಂತಹ ಹವಾ ನಿಯಂತ್ರಿತ ವ್ಯವಸ್ಥೆಯೊಂದಿಗೆ (ಎಸಿ)ಆಧುನಿಕ ಶೈಲಿಯ ಸೌಂಡ್‌ ಸಿಸ್ಟಂ, 4ಕೆ ಮಾದರಿಯ ಡಿಜಿಟಲ್‌ ಪ್ರೊಜೆಕ್ಟ್ ಸಹಿತ ಅತ್ಯಾಧುನಿಕ ವ್ಯವಸ್ಥೆಗಳನ್ನು ಸುಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಇದು ಕರಾವಳಿಯ ಸಿನೆಮಾ ಥಿಯೇಟರ್‌ ಗಳ ಪಾಲಿಗೆ ಹೊಸ ಅನುಭವವಾಗಿತ್ತು. 64 ಚಾನೆಲ್‌ Dolby Atmos ಸಿಸ್ಟಂನಲ್ಲಿ ಸುಚಿತ್ರ ಈಗಾಗಲೇ ಸಿನೆಮಾ ಪ್ರೇಮಿಗಳಿಗೆ ರಸದೌತಣ ನೀಡುತ್ತಿದೆ. ಇದರಿಂದಾಗಿ ತೆರೆಯ ಮೇಲೆ ಕಾಣುವ ಪ್ರತೀ ಸಿನೆಮಾದ ಸೌಂಡ್‌ ವೀಕ್ಷಕರಿಗೆ ರೋಚಕ ಅನುಭವ ನೀಡಲಿದೆ. ಈ ಚಿತ್ರಮಂದಿರದ ನವೀಕರಣದ ಕೆಲಸವನ್ನು ಕಳೆದ ಜೂನ್‌ ನಿಂದ ಆರಂಭಿಸಲಾಗಿದ್ದು, ಇತ್ತೀಚೆಗೆ ಚಿತ್ರ ಪ್ರದರ್ಶನ ಆರಂಭವಾಗಿತ್ತು.

ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ Dolby Atmos ಸ್ಕ್ರೀನ್‌ ವ್ಯವಸ್ಥೆ ಜಾರಿಗೆ ಬಂದಿದೆ. ದೇಶದ ಸುಮಾರು 400 ಸ್ಕ್ರೀನ್‌ಗಳಲ್ಲಿ ಈಗಾಗಲೇ ಇದೇ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಿನೆಮಾ ಪ್ರದರ್ಶನಗೊಳ್ಳುವಾಗ ಥಿಯೇಟರ್‌ನ ನಾಲ್ಕೂ ಮೂಲೆಗಳಲ್ಲಿ ಪ್ರೇಕ್ಷಕನ ಕಿವಿಗೆ ಸಮರ್ಪಕವಾಗಿ ಸ್ವರ ಕೇಳುವ ರೀತಿಯಲ್ಲಿ ಥಿಯೇಟರ್‌ ಅನ್ನು ಸಿದ್ಧಪಡಿಸಲಾಗುತ್ತದೆ. ಸುಚಿತ್ರದಲ್ಲಿ ಇಂತಹ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಸುಚಿತ್ರ ಥಿಯೇಟರ್‌ನ ಬಾಲ್ಕನಿಯಲ್ಲಿ 272 ಹಾಗೂ ಕೆಳಗಡೆ 534 ಸೀಟು ವ್ಯವಸ್ಥೆ ಇದ್ದು, ಎಲ್ಲ  ಸೀಟುಗಳನ್ನು ಹೊಸದಾಗಿ ಸುಸಜ್ಜಿತ ರೀತಿಯಲ್ಲಿ ಜೋಡಿಸಲಾಗಿದೆ. ಟಿಕೆಟ್‌ ದರವನ್ನು ಪ್ರಸ್ತುತ ದರಕ್ಕಿಂತ ಸ್ವಲ್ಪ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಮುಂದೆ 100 ರೂ. ಹಾಗೂ 150 ರೂ. ಎಂದು ನಿಗದಿಪಡಿಸಲು ಚಿಂತಿಸಲಾಗಿದೆ. ಮಲ್ಟಿಪ್ಲೆಕ್ಸ್‌ ಸಿನೆಮಾದ ಟಿಕೆಟ್‌ ಗಳನ್ನು ಆನ್‌ ಲೈನ್‌ (ಬುಕ್‌ ಮೈ ಶೋ) ಮೂಲಕ ಪಡೆಯುವ ರೀತಿಯಲ್ಲಿಯೇ ಸುಚಿತ್ರ ಥಿಯೇಟರ್‌ ನ ಟಿಕೆಟ್‌ಗಳು ದೊರೆಯುತ್ತಿದೆ. ಥಿಯೇ ಟರ್‌ನ ಒಳಗಡೆಯ ಕ್ಯಾಂಟೀನ್‌ ವ್ಯವಸ್ಥೆ ಯಲ್ಲೂ ಸುಧಾರಣೆಯಾಗಲಿವೆೆ. ಸುಚಿತ್ರಾ ಥಿಯೇಟರ್‌ ಆಧುನಿಕ ಶೈಲಿಗೆ ಬದಲಾವಣೆಗೊಂಡಂತೆ, ಅದರ ಪಕ್ಕದಲ್ಲೇ ಇರುವ ಪ್ರಭಾತ್‌ ಥಿಯೇಟರ್‌ ಕೂಡ ಈಗ ಆಧುನಿಕ ಸ್ಪರ್ಶ ಪಡೆದುಕೊಳ್ಳುತ್ತಿದೆ. ಇಲ್ಲೂ ಕೂಡ ಅತ್ಯಾಧುನಿಕ ಪ್ರಾಜೆಕ್ಟ್, ಸೌಂಡ್‌ ಸಿಸ್ಟಂ, ಹವಾನಿಯಂತ್ರಿತ ಸೌಕರ್ಯ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳ ಜೋಡಣೆಯಾಗುತ್ತಿದೆ.

 

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

2 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago