ಸುನಿಲ್ ಕುಮಾರ್ ಅವರೇ ಸಾರಿಗೆ ಸೇವೆಯಲ್ಲಿ ಉಡುಪಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ : vishwanews24
ಉಡುಪಿ ಜಿಲ್ಲೆಗೆ ಒಂದೇ ಬಂದು ಸಾರಿಗೆ ಬಸ್ಸನ್ನು ನೀಡದ ನಿಮ್ಮ ಇಂದಿನ ಹೇಳಿಕೆ ಹಾಸ್ಯಾಸ್ಪದ
ಉಡುಪಿ : ಕೈಲಾಗದವನು ಮೈ ಪರಚಿಕೊಂಡ ಎಂಬತ್ತೆ ಮಾಜಿ ಸಚಿವ ಸುನಿಲ್ ಕುಮಾರ್ ವರ್ತಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಆಚಾರ್ಯ ಉಚಿತ ಸಾರಿಗೆ ವಿಚಾರವಾಗಿ ತಿರುಗೇಟು ನೀಡಿದ್ದಾರೆ.
ಸಚಿವರಾಗಿ ಉಡುಪಿ ಜಿಲ್ಲೆಗೆ ಒಂದು ಸರ್ಕಾರಿ ಬಸ್ ಓಡಿಸದ ಸುನಿಲ್ ಕುಮಾರ್ ಇವತ್ತು ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಅವರು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಇದ್ದ ಸಮಯದಲ್ಲಿ ಉಡುಪಿಗೆ ಗ್ರಾಮೀಣ ಭಾಗಕ್ಕೆ ನರ್ಮ್ ಬಸ್ಸುಗಳನ್ನು ನೀಡಿದ್ದು ಮತ್ತು ಅದನ್ನು ನಿಲ್ಲಿಸಿದ್ದು ಬಿಜೆಪಿ ಸರ್ಕಾರ ಎಂಬುದು ಸುನಿಲ್ ಕುಮಾರ್ ಅವರಿಗೆ ಮರೆತು ಹೋಗಿರಬಹುದು ಆದರೆ ಉಡುಪಿ ಜಿಲ್ಲೆಯ ಜನತೆ ಅದನ್ನ ಮರೆತಿಲ್ಲ ಎಂದು ಅವರು ಹೇಳಿದರು.
ಇಂಧನ ಸಚಿವರಾಗಿ ಉಡುಪಿ ಜಿಲ್ಲೆಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸುನಿಲ್ ಕುಮಾರ್ ಅವರು ಇಂದು ಖಾಸಗಿ ಬಸ್ಸಿನಲ್ಲಿ ಉಚಿತ ಪ್ರಯಾಣವನ್ನು ಕೇಳುತ್ತಿದ್ದಾರೆ ಇದೊಂದು ದೊಂಬರಾಟದ ಹೇಳಿಕೆ ಎಂದು ಅವರು ಕಟುವಾಗಿ ಟೀಕಿಸಿದರು.
ಸಚಿವರಾಗಿದ್ದ ಸಮಯದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಭಾಗಗಳಿಗೆ ಸರ್ಕಾರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿದ್ದರೇ ಇವತ್ತು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆ ಉಡುಪಿ ಜಿಲ್ಲೆಯ ಎಲ್ಲಾ ಮಹಿಳೆಯರಿಗೂ ಕೂಡ ಲಾಭವಾಗುತ್ತಿತ್ತು ಆದರೆ ಆ ಸರ್ಕಾರಿ ಬಸ್ಸಿನ ಯೋಜನೆಯನ್ನು ತಾರದೆ ಖಾಸಗಿ ಬಸ್ಸುಗಳ ಮಾಲೀಕರ ಜೊತೆ ಲಾಭಿ ಮಾಡಿಕೊಂಡಿರುವ ಪರಿಣಾಮವಾಗಿ ಇವತ್ತು ಉಡುಪಿ ಜಿಲ್ಲೆಯ ಹಲವು ಕಡೆ ಮಹಿಳೆಯರು ಈ ಸೇವೆಯಿಂದ ವಂಚಿತರಾಗುತ್ತಿದ್ದಾರೆ ಎಂದರು.
ಆದರೂ ಉಡುಪಿ ಜಿಲ್ಲೆಯ ಜನತೆ ಇಂತಹ ಅವಕಾಶವಾದಿ ರಾಜಕೀಯ ವ್ಯಕ್ತಿಗಳ ಬಗ್ಗೆ ಎಚ್ಚೆತ್ತುಕೊಂಡರೆ ಉತ್ತಮ ಎಂದು ಅವರು ತಿಳಿಸಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…