Featured

ಕೈಲಾಗದವನು ಮೈಪರಚಿಕೊಂಡ:ಶಾಸಕ ಸುನಿಲ್ ಕುಮಾರ್ ಗೆ ಕಾಂಗ್ರೇಸ್ ಮುಖಂಡ ಕೃಷ್ಣಾಮೂರ್ತಿ ಆಚಾರ್ಯ ತಿರುಗೇಟು : vishwanews24

ಸುನಿಲ್ ಕುಮಾರ್ ಅವರೇ ಸಾರಿಗೆ ಸೇವೆಯಲ್ಲಿ ಉಡುಪಿಗೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದ ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ : vishwanews24

ಉಡುಪಿ ಜಿಲ್ಲೆಗೆ ಒಂದೇ ಬಂದು ಸಾರಿಗೆ ಬಸ್ಸನ್ನು ನೀಡದ ನಿಮ್ಮ ಇಂದಿನ ಹೇಳಿಕೆ ಹಾಸ್ಯಾಸ್ಪದ

ಉಡುಪಿ : ಕೈಲಾಗದವನು ಮೈ ಪರಚಿಕೊಂಡ ಎಂಬತ್ತೆ ಮಾಜಿ ಸಚಿವ ಸುನಿಲ್ ಕುಮಾರ್ ವರ್ತಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಆಚಾರ್ಯ ಉಚಿತ ಸಾರಿಗೆ ವಿಚಾರವಾಗಿ ತಿರುಗೇಟು ನೀಡಿದ್ದಾರೆ.

ಸಚಿವರಾಗಿ ಉಡುಪಿ ಜಿಲ್ಲೆಗೆ ಒಂದು ಸರ್ಕಾರಿ ಬಸ್ ಓಡಿಸದ ಸುನಿಲ್ ಕುಮಾರ್ ಇವತ್ತು ಖಾಸಗಿ ಬಸ್ಸಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಬೇಕೆಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿ ಆಚಾರ್ಯ ಅವರು ತಿಳಿಸಿದ್ದಾರೆ.


ಕಾಂಗ್ರೆಸ್ ಸರ್ಕಾರ ಇದ್ದ ಸಮಯದಲ್ಲಿ ಉಡುಪಿಗೆ ಗ್ರಾಮೀಣ ಭಾಗಕ್ಕೆ ನರ್ಮ್ ಬಸ್ಸುಗಳನ್ನು ನೀಡಿದ್ದು ಮತ್ತು ಅದನ್ನು ನಿಲ್ಲಿಸಿದ್ದು ಬಿಜೆಪಿ ಸರ್ಕಾರ ಎಂಬುದು ಸುನಿಲ್ ಕುಮಾರ್ ಅವರಿಗೆ ಮರೆತು ಹೋಗಿರಬಹುದು ಆದರೆ ಉಡುಪಿ ಜಿಲ್ಲೆಯ ಜನತೆ ಅದನ್ನ ಮರೆತಿಲ್ಲ ಎಂದು ಅವರು ಹೇಳಿದರು.


ಇಂಧನ ಸಚಿವರಾಗಿ ಉಡುಪಿ ಜಿಲ್ಲೆಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸುನಿಲ್ ಕುಮಾರ್ ಅವರು ಇಂದು ಖಾಸಗಿ ಬಸ್ಸಿನಲ್ಲಿ ಉಚಿತ ಪ್ರಯಾಣವನ್ನು ಕೇಳುತ್ತಿದ್ದಾರೆ ಇದೊಂದು ದೊಂಬರಾಟದ ಹೇಳಿಕೆ ಎಂದು ಅವರು ಕಟುವಾಗಿ ಟೀಕಿಸಿದರು.


ಸಚಿವರಾಗಿದ್ದ ಸಮಯದಲ್ಲಿ ಉಡುಪಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಗ್ರಾಮೀಣ ಭಾಗಗಳಿಗೆ ಸರ್ಕಾರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿದ್ದರೇ ಇವತ್ತು ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆ ಉಡುಪಿ ಜಿಲ್ಲೆಯ ಎಲ್ಲಾ ಮಹಿಳೆಯರಿಗೂ ಕೂಡ ಲಾಭವಾಗುತ್ತಿತ್ತು ಆದರೆ ಆ ಸರ್ಕಾರಿ ಬಸ್ಸಿನ ಯೋಜನೆಯನ್ನು ತಾರದೆ ಖಾಸಗಿ ಬಸ್ಸುಗಳ ಮಾಲೀಕರ ಜೊತೆ ಲಾಭಿ ಮಾಡಿಕೊಂಡಿರುವ ಪರಿಣಾಮವಾಗಿ ಇವತ್ತು ಉಡುಪಿ ಜಿಲ್ಲೆಯ ಹಲವು ಕಡೆ ಮಹಿಳೆಯರು ಈ ಸೇವೆಯಿಂದ ವಂಚಿತರಾಗುತ್ತಿದ್ದಾರೆ ಎಂದರು.

ಆದರೂ ಉಡುಪಿ ಜಿಲ್ಲೆಯ ಜನತೆ ಇಂತಹ ಅವಕಾಶವಾದಿ ರಾಜಕೀಯ ವ್ಯಕ್ತಿಗಳ ಬಗ್ಗೆ ಎಚ್ಚೆತ್ತುಕೊಂಡರೆ ಉತ್ತಮ ಎಂದು ಅವರು ತಿಳಿಸಿದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago